ಮುಖ್ಯಮಂತ್ರಿಗಳ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು : ಬಸನಗೌಡ ದದ್ಧಲ್
ರಾಯಚೂರು, 24 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಇವರ ಆಶ್ರಯದಲ್ಲಿ ಜೂನ್ 23ರಂದು ರಾಯಚೂರು ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಯರಗೇರಾ ಗ್ರಾಮದಲ್ಲಿ ನಡೆದ ಬುಡಕಟ್ಟು ಸಾಂಸ್ಕ್ರತಿಕ ಉತ್ಸವ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ
ಪೊಲೀಸ್ ಮುಖ್ಯಮಂತ್ರಿಗಳ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು: ಶಾಸಕರಾದ ಬಸನಗೌಡ ದದ್ಧಲ್


ರಾಯಚೂರು, 24 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಇವರ ಆಶ್ರಯದಲ್ಲಿ ಜೂನ್ 23ರಂದು ರಾಯಚೂರು ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಯರಗೇರಾ ಗ್ರಾಮದಲ್ಲಿ ನಡೆದ ಬುಡಕಟ್ಟು ಸಾಂಸ್ಕ್ರತಿಕ ಉತ್ಸವ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನಾಮಫಲಕ ಅನಾವರಣ, 371(ಜೆ) ದಶಮಾನೋತ್ಸವ ಮತ್ತು 936 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಕ್ಷದ ನಾಯಕರು ಹಾಗೂ ಸಂಸದ ಡಾ.ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿಗ ಸಿದ್ದರಾಮಯ್ಯ ಮತ್ತು ಸಚಿವರು, ಶಾಸಕರು ಸೇರಿದಂತೆ ಅನೇಕ ಗಣ್ಯ ಮಹನಿಯರು ಮತ್ತು ಕ್ಷೇತ್ರದ ಜನರು ಭಾಗಿಯಾಗಿ ಯಶಗೊಳಿಸಿದ್ದು ತಮಗೆ ಸಂತಸ ತಂದಿದೆ ಎಂದು ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಶಾಸಕರಾದ ಬಸನಗೌಡ ದದ್ದಲ್ ಅವರು ತಿಳಿಸಿದ್ದಾರೆ.

ರಾಯಚೂರು ಗ್ರಾಮೀಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಯರಗೇರಾ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಷೇತ್ರದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದು ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಿದರು. ಜೊತೆಗೆ ಬುಡಕಟ್ಟು ಕಾರ್ಯಕ್ರಮದ ಸೊಬಗನ್ನು ಕಣ್ತುಂಬಿಕೊಂಡರು. ವಿಶೇಷವಾಗಿ ತಾಯಂದಿರು, ಸಹೋದರಿಯರು ಸೇರಿದಂತೆ ಸಾರ್ವಜನಿಕರು ಉತ್ಸುಕರಾಗಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದು ತಮಗೆ ಸಂತಸ ತಂದಿದೆ. ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಸಂಸದ ಡಾ.ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ಶಾಸಕರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ ಸಂತೋಷವನ್ನು ಹೆಚ್ಚಿಸಿದ್ಧಾರೆ. ಹಾಗಾಗಿ ಡಾ.ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಎಲ್ಲ ಸಚಿವರಿಗೆ, ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ, ನಿಗಮ, ಸಮಿತಿ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಸದಸ್ಯರಿಗೆ, ನಾಮ ನಿರ್ದೆಶಿತ ಸದಸ್ಯರು ಹಾಗೂ ಇತರ ಎಲ್ಲ ಗಣ್ಯ ಮಹನಿಯರಿಗೆ, ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಸಹಕಾರ ನೀಡಿದ ಎಲ್ಲ ಮುಖಂಡರಿಗೆ, ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಅಭಿನಂದನೆಗಳನ್ನು ತಿಳಿಸುವೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಸಕ್ರಿಯ ಭಾಗಿಯಾಗಿದ್ದಾರೆ. ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮದ ಪ್ರತಿನಿಧಿಗಳು ಈ ಕಾರ್ಯಕ್ರಮಕ್ಕೆ ವಿಶೇಷ ಪ್ರಚಾರ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರತ್ಯೇಕ್ಷವಾಗಿ, ಪರೋಕ್ಷವಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದಿಸುವೆ, ಧನ್ಯವಾದಗಳನ್ನು ಹೇಳುವೆ ಎಂದು ಶಾಸಕರಾದ ಬಸವನಗೌಡ ದದ್ಧಲ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande