ಬೆಂಗಳೂರು, 24 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಕಮಿಷನ್ ಮೂಲಕ ಆಡಳಿತ ನಡೆದಿದೆ. ಇದೆಲ್ಲವನ್ನೂ ನೋಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರೆಯಲು ಯೋಗ್ಯವಾಗಿಲ್ಲ, ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಸರಕಾರದ ಕಾರ್ಯವೈಖರಿಗೆ ಕಾಂಗ್ರೆಸ್ ಶಾಸಕರೇ ಹತಾಶರಾಗಿದ್ದಾರೆ. ಈ ಸರ್ಕಾರ ಇದೆಯೋ, ಸತ್ತು ಹೋಗಿದೆಯೋ ಗೊತ್ತಿಲ್ಲ. ಲಂಚ ಇಲ್ಲದೇ ಸರ್ಕಾರದಲ್ಲಿ ಯಾವುದೇ ಕೆಲಸ ಮಾಡಿಕೊಡುತ್ತಿಲ್ಲ. ಕಮಿಷನ್ ಮಾಫಿಯಾ ಮೂಲಕ ಆಡಳಿತ ನಡೆದಿದೆ ಎಂದು ಆರೋಪಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa