ಉದ್ಯೋಗ ನೀಡುವಲ್ಲಿ ವಂಚನೆ : ಕಂಪನಿ ಮತ್ತು ಬಳ್ಳಾರಿ ಜಿಲ್ಲಾಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬಳ್ಳಾರಿ, 24 ಜೂನ್ (ಹಿ.ಸ.) : ಆ್ಯಂಕರ್ : ಜೆಎಸ್‍ಡಬ್ಲ್ಯೂ ಕಾರ್ಖಾನೆ ನಮ್ಮ ಜಮೀನನ್ನು ರಸ್ತೆಗಾಗಿ ವಶಕ್ಕೆ ತೆಗೆದುಕೊಂಡು ಐದು ವರ್ಷಗಳಾಗಿದ್ದರೂ ಉದ್ಯೋಗ ನೀಡುತ್ತಿಲ್ಲ ಎಂದು ಆರೋಪಿಸಿ ಭೂ ಸಂತ್ರಸ್ತ ಕುಡತಿನಿ ಗ್ರಾಮಸ್ಥರು ಕರ್ನಾಟಕ ಲೋಕಾಯುಕ್ತಕ್ಕೆ ಮಂಗಳವಾರ ದೂರು ಸಲ್ಲಿಸಿದ್ದಾರೆ. ಕುಡತಿನಿ ಗ್ರ
ಉದ್ಯೋಗ ನೀಡುವಲ್ಲಿ ವಂಚನೆ : ಕಂಪನಿ ಮತ್ತು ಬಳ್ಳಾರಿ ಜಿಲ್ಲಾಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು


ಬಳ್ಳಾರಿ, 24 ಜೂನ್ (ಹಿ.ಸ.) :

ಆ್ಯಂಕರ್ : ಜೆಎಸ್‍ಡಬ್ಲ್ಯೂ ಕಾರ್ಖಾನೆ ನಮ್ಮ ಜಮೀನನ್ನು ರಸ್ತೆಗಾಗಿ ವಶಕ್ಕೆ ತೆಗೆದುಕೊಂಡು ಐದು ವರ್ಷಗಳಾಗಿದ್ದರೂ ಉದ್ಯೋಗ ನೀಡುತ್ತಿಲ್ಲ ಎಂದು ಆರೋಪಿಸಿ ಭೂ ಸಂತ್ರಸ್ತ ಕುಡತಿನಿ ಗ್ರಾಮಸ್ಥರು ಕರ್ನಾಟಕ ಲೋಕಾಯುಕ್ತಕ್ಕೆ ಮಂಗಳವಾರ ದೂರು ಸಲ್ಲಿಸಿದ್ದಾರೆ.

ಕುಡತಿನಿ ಗ್ರಾಮದ ಹತ್ತು ಕುಟುಂಬಗಳವರು ಲೋಕಾಯುಕ್ತ ಕಚೇರಿಗೆ ಮಂಗಳವಾರ ಭೇಟಿ ನೀಡಿ, ದೂರು ಸಲ್ಲಿಸಿ, ವರದಿಗಾರರ ಜೊತೆ ಮಾತನಾಡಿ, ಕಂಪನಿಯು ಭೂ ಸಂತ್ರಸ್ತರಿಗೆ ಪರಿಹಾರ ಪಾವತಿಸಿದೆ, ಆದರೆ, ಉದ್ಯೋಗ ನೀಡುತ್ತಿಲ್ಲ. ಈ ನಿಟ್ಟಿನಲ್ಲಿ ಕಂಪನಿಯ ಅಧಿಕಾರಿಗಳು ಭೂ ಸಂತ್ರಸ್ತರನ್ನು ವಂಚಿಸುತ್ತಿದೆ ಎಂದು ಆರೋಪಿಸಿದರು.

ಈ ಕುರಿತು ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದೆವು. ಜಿಲ್ಲಾಧಿಕಾರಿಗಳು ಜಿಂದಾಲ್ ಕಾರ್ಖಾನೆಗೆ ಪತ್ರ ಬರೆದು, ಭೂ ಸಂತ್ರಸ್ತರಾದ ತಮಗೆ ಸೂಕ್ತ ಉದ್ಯೋಗ ನೀಡಬೇಕು ಎಂದು ಆದೇಶ ನೀಡಿದ್ದರು. ಆದರೆ, ಜಿಂದಾಲ್‍ನ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಪತ್ರವನ್ನು ಕಡೆಗಣಿಸಿ, ಭೂ ಸಂತ್ರಸ್ತ ಕುಟುಂಬಗಳಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜಿಂದಾಲ್‍ನ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಕುಡತಿನಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಈ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ನಮಗೆ ನ್ಯಾಯ ಕೊಡಿಸುವಲ್ಲಿ ವಿಫಲರಾಗಿದ್ದಾರೆ. ಆರೋಪಿತ ಅಧಿಕಾರಿಗಳನ್ನು ಪೊಲೀಸರು ಬಂಧಿಸಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande