ಬಳ್ಳಾರಿ, 24 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯದಲ್ಲೇ ಮೊದಲ ಬಾರಿಗೆ ಕೃಷಿ ಕ್ಷೇತ್ರದಲ್ಲಿ ಎಂಎಸ್ಎಂಇ (ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳು)ಗಳ ಪಾತ್ರ ವಿಷಯದ ಕುರಿತು ಜೂನ್ 27 ರ ಶುಕ್ರವಾರ ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ನಗರದ ಬಸವ ಭವನದಲ್ಲಿ ಒಂದು ದಿನದ ಕಾರ್ಯಾಗಾರ ನಡೆಯಲಿದೆ.
ಸಿಎ ಸಿರಿಗೇರಿ ಪನ್ನರಾಜ್ ಅವರು ಸುದ್ದಿಗಾರರಿಗೆ ಮಂಗಳವಾರ ಈ ಮಾಹಿತಿ ನೀಡಿದ್ದು, ಅಂತಾರಾಷ್ಟ್ರೀಯ ಎಂಎಸ್ಎಂಇ ದಿನಾಚರಣೆಯ ಅಂಗವಾಗಿ ಭಾರತೀಯ ಚಾರ್ಟೆಡ್ ಅಕೌಂಟೆಂಟ್ಸ್ ಸಂಸ್ಥೆಯ ಬಳ್ಳಾರಿ ಶಾಖೆಯು ಈ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಕಾರ್ಯಾಗಾರದಲ್ಲಿ ಸಾವಿರಾರು ಕೃಷಿಕರು ಪಾಲ್ಗೊಳ್ಳುವ ನಿರೀಕ್ಷೆಗಳಿವೆ ಎಂದರು.
ಯುವಕರು, ಕೃಷಿಕರು, ವಿದ್ಯಾಭ್ಯಾಸ ಮಾಡಿ ಉದ್ಯೋಗಗಳನ್ನು ಅರೆಸಿಕೊಂಡು ಹೋಗುವ ಬದಲು ಸಣ್ಣ ಉದ್ದಿಮೆಗಳನ್ನು ಸ್ಥಾಪಿಸಿ, ಉದ್ಯೋಗಗಳನ್ನು ಸೃಷ್ಟಿಸಬೇಕು ಎನ್ನವು ಉದ್ದೇಶವನ್ನು - ದೂರದೃಷ್ಟಿಯನ್ನು ಹೊಂದುವ ಮೂಲಕ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯಗಳು ಹಾಗೂ ಬ್ಯಾಂಕ್ ಸೌಲಭ್ಯಗಳು ಮತ್ತು ತಂತ್ರಜ್ಞಾನದ ಸಲಹೆಗಳನ್ನು ಕಾರ್ಯಾಗಾರದಲ್ಲಿ ಉಚಿತವಾಗಿ ನೀಡಲಾಗುವುದು ಎಂದರು.
ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎಂ. ಹನುಮಂತಪ್ಪ ಅವರು ಚಾಲನೆ ನೀಡಲಿದ್ದಾರೆ. ಕರ್ನಾಟಕ ಗ್ರಾಮಿಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ್ ಎಂ. ಭಂದಿವಾಡ, ಸಿ.ಎ. ಮಧುಕರ್, ಸಿಎ ಪಂಪಣ್ಣ, ಸೇರಿದಂತೆ ಸಿಕಾಸ ಮತ್ತು ಮಾಜಿ ಶಾಖಾ ಅಧ್ಯಕ್ಷ ಪ್ರಮೋದ್ ಹೆಗಡೆ ಸೇರಿದಂತೆ ಇತರರು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಸಿಎಗಳಾದ ಗಜರಾಜ, ವಿಶ್ವನಾಥ್ ಆಚಾರಿ, ಸ್ವಪ್ನ ಪ್ರಿಯ, ಶರಣ್ ಪಾಟೀಲ್, ಜಿತೇಂದ್ರ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್