ಬೆಂಗಳೂರು, 24 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯಾದ್ಯಂತ ಭ್ರಷ್ಟಾಚಾರ ವಿರೋಧಿ ಕಠಿಣ ನಿಲುವಿನ ಭಾಗವಾಗಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆ ಅನೇಕ ಜಿಲ್ಲೆಗಳ ಹಲವಾರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು, ಗದಗ, ಧಾರವಾಡ, ಕಲಬುರ್ಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ದಾಳಿಗಳು ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆದಿದೆ.
ದಾಳಿಗೊಳಗಾದ ಅಧಿಕಾರಿಗಳು ವಿವರ ಇಲ್ಲಿದೆ..
ಡಾ. ಎಸ್. ಪ್ರದೀಪ್, ಸಹಾಯಕ ಸಂಶೋಧನಾ ನಿರ್ದೇಶಕ, ಅರ್ಗ್ಯಾನಿಕ್ ಫಾರ್ಮಿಂಗ್, ಶಿವಮೊಗ್ಗ
ಲತಾ ಮಣಿ, ಖಾತೆ ಅಧಿಕಾರಿ, ಚಿಕ್ಕಮಗಳೂರು ನಗರಸಭೆ
ಕೆ.ಜಿ. ಅಮರನಾಥ್, ಮುಖ್ಯಾಧಿಕಾರಿ, ಪಟ್ಟಣ ಪಂಚಾಯಿತಿ, ಆನೆಕಲ್
ಧ್ರುವರಾಜ್, ಪಟ್ಟಣ ಪೊಲೀಸ್ ನಿರೀಕ್ಷಕ, ಗದಗ
ಅಶೋಕ್ ವಾಲ್ಸಂದ್, ಇಂಜಿನಿಯರ್, ಮಲಪ್ರಭಾ ಯೋಜನೆ, ಧಾರವಾಡ
ಮಲ್ಲಿಕಾರ್ಜುನ ಅಲಿಪುರ, ಮಾಜಿ ಎಂಜಿನಿಯರ್, ಗ್ರಾಮೀಣಾಭಿವೃದ್ಧಿ ಇಲಾಖೆ, ಕಲಬುರ್ಗಿ
ರಾಮಚಂದ್ರ, ಪಿಡಿಒ, ಸಣ್ಣೂರು ಗ್ರಾ.ಪಂ., ಕಲಬುರ್ಗಿ
ಪ್ರಕಾಶ್ ಎಇ, ಬಿಬಿಎಂಪಿ, ಗೋವಿಂದರಾಜನಗರ, ಬೆಂಗಳೂರು.
ಲೋಕಾಯುಕ್ತ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ಮುಂದುವರೆದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa