ಕಲಬುರಗಿ 24 ಜೂನ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಾಮಾಜಿಕ ನ್ಯಾಯವನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನಗರದ ಬಸವರಾಜಪ್ಪ ಅಪ್ಪ ಸ್ಮರಣಾರ್ಥ ನಡೆದ 935 ಪಾಲಿಕೆ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಪಾಲಿಕೆಯಿಂದ ನೇರ ವೇತನ ಪಾವತಿ ಆದೇಶ ಪತ್ರ ವಿತರಣೆ, ಗ್ರಾಮ ಆಡಳಿತ ನೇಮಕಾತಿ ಪತ್ರ ವಿತರಣೆ ಹಾಗೂ ಕ್ರೋಮ್ ಬುಕ್, ವಿಶೇಷ ಚೇತನ ರೋಗಿಗಳಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವರು ಸಾಂಕೇತಿಕವಾಗಿ ನೇಮಕಾತಿ ಪತ್ರ ವಿತರಿಸಿದರು. ಜೊತೆಗೆ ಹೊಲಿಗೆ ಯಂತ್ರ ಹಾಗೂ ತ್ರಿಚಕ್ರ ವಾಹನಗಳನ್ನು ವಿತರಿಸಿದರು.
ಕಾಂಗ್ರೆಸ್ ಪಕ್ಷದ ಸಿದ್ದಾಂತ ಹಾಗೂ ಸರ್ಕಾರ ಬದ್ಧತೆಯಿಂದಾಗಿ ನಾವು ಇಂದು ನಿಮಗೆಲ್ಲ ನೇಮಕಾತಿ ಆದೇಶ ವಿತರಿಸಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಇಲ್ಲಿಂದ ನೀವೆಲ್ಲ ಮಹಾನಗರ ಪಾಲಿಕೆಯ ನೌಕರರಾಗಿರುತ್ತೀರಿ. ಇದು ಅತ್ಯಂತ ಸಂತೋಷದ ಕ್ಷಣ ಎಂದು ಸಚಿವರು ಹೇಳಿದರು.
ಪೌರಕಾರ್ಮಿಕರು ಇದ್ದರೆ ನಗರವೆಲ್ಲ ತುಂಬಿದಂತೆ ಇರಲು ಸಾಧ್ಯವಿಲ್ಲ. ನಿಮ್ಮೆಲ್ಲರ ಕಷ್ಟಗಳ ನಡುವೆ ನಗರವನ್ನು ಅನುಭವಿಸಲು ಸಾಧ್ಯವಿಲ್ಲ. ಮಾಡುತ್ತಿರುವಿರಿ ನಿಮಗೆಲ್ಲ ಧನ್ಯವಾದಗಳು ಎಂದು ಕೊಂಡಾಡಿದ ಸಚಿವರು 64 ಗ್ರಾಮಸೇವಕರ ನೇಮಕಾತಿ ಮಾಡಿ ಗ್ರಾಮ ಸೇವಕರಿಗೆ ತಂತ್ರಾಂಶ ದಾಖಲಿಸಲು ಅನುಕೂಲವಾಗಲೆಂದು 154 ಕ್ರೋಮ್ ಬುಕ್ ವಿತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಇದೆ ಮೊದಲಬಾರಿಗೆ ಇಂತಹ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಹೇಳಿದರು.
ಪೌರಕಾರ್ಮಿಕರಿಗೆ ಭವನ ನಿರ್ಮಾಣ ಮಾಡುವಂತೆ ಇದಕ್ಕೂ ಮುನ್ನ ಮಾತನಾಡಿ ಕಾಮಕನೂರು ಮನವಿಗೆ ಸ್ಪಂದಿಸಿದ ಸಚಿವರು, ಸಾರ್ವಜನಿಕರಿಗೆ ಒದಗಿಸಿದರೆ ತಾವು ಅನುದಾನ ನೀಡುವುದಾಗಿ ಘೋಷಿಸಿದ ಪ್ರಿಯಾಂಕ್ ಖರ್ಗೆ, ಶಾಸಕರು ಹಾಗೂ ಸಂಸದರು ಕೂಡ ಅನುದಾನ ಒದಗಿಸಿ ಎಂದು ಮನವಿ ಮಾಡಿದರು ಮಾಡಿದರು.
ಕೇಂದ್ರ ಸರ್ಕಾರ ಕಲಬುರಗಿ ಯನ್ನು ಸ್ಮಾರ್ಟ್ ಸಿಟಿ ಮಾಡಲು ನಿರಾಕರಿಸಿತು. ಆದರೆ ರಾಜ್ಯ ಸರ್ಕಾರ ಕಲಬುರಗಿ ಮುಂದಿನ 25 ವರ್ಷಕ್ಕೆ ಹೇಗಿರಬೇಕೋ ಹಾಗೆ ಸುಂದರ ನಗರವನ್ನಾಗಿ ಮಾಡಲು IIHS ( Indian Institute for Human Settlements) ಸಂಸ್ಥೆಯಲ್ಲಿ ಒಡಂಬಡಿಕೆ ಸಿದ್ಧಪಡಿಸಿದ ನೀಲನಕ್ಷೆ ತಯಾರಿಸಿ ಮುಂದಿನ ಮೂರು ನಿರ್ಮಾಣ ನವ ಕಲಬುರಗಿ ಮಾಡಲಾಗುವುದು.
ಇದರ ಜೊತೆಗೆ 23 ಸರ್ಕಲ್ ಗಳ ಮರುನಿರ್ಮಾಣ, 31 ಉದ್ಯಾನವನ ಅಭಿವೃದ್ದಿ ಹಾಗೂ 4 ಕೆರೆಗಳನ್ನು ಅಭಿವೃದ್ದಿಪಡಿಸಲಾಗಿದೆ. ನಗರದ ಎಲ್ಲ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಯಿತು ಕಲಬುರಗಿಯಲ್ಲಿ ಅಗತ್ಯವಿರುವ ಮೂಲಭೂತ ಸೌಲಭ್ಯ ಸೇರಿದಂತೆ ಇತರ ಸೌಲಭ್ಯಗಳನ್ನು ಒದಗಿಸುವ ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು.
ನಗರದ ವಾಜಪೇಯಿ ಬಡಾವಣೆಯಲ್ಲಿ ನೈಸ್ (NICE- ನಾಗಾವಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಸ್ಥೆ) ತರಬೇತಿ ಕೇಂದ್ರವನ್ನು ಸ್ಥಾಪಿಸಲಾಯಿತು ಮುಂದಿನ ಜುಲೈ ಕೊನೆಯ ವಾರದಲ್ಲಿ ಉದ್ಘಾಟನೆ ಮಾಡಲಾಗುವುದು. ಮೊದಲ 500 ಜನ ಐಎಎಸ್, ಕೆ ಇ ಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮುಂದೆ 2000 ಅಭ್ಯರ್ಥಿಗಳಿಗೆ ತರಬೇತಿ ನೀಡುವ ಗುರಿಯನ್ನು ಹೊಂದಲಾಗಿದೆ.
ಬಿಜೆಪಿ ನಾಯಕರು ನನ್ನನ್ನು ಟೀಕಿಸಲು ಕಲಬುರಗಿಗೆ ನಾಲ್ಕು ಸಲ ಬಂದಿದ್ದಾರೆ. ನಮ್ಮ ಸರ್ಕಾರದಿಂದ ಆಗಬೇಕಾದ ಅಭಿವೃದ್ದಿ ಕೆಲಸಗಳ ಬಗ್ಗೆ ಅವರು ಚರ್ಚಿಸುವ ಬದಲು ನನ್ನ ಮೇಲೆ ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ.
ತಮ್ಮ ಉದ್ದೇಶಿತ ಅಮೇರಿಕಾ ಪ್ರವಾಸಕ್ಕೆ ಕೇಂದ್ರ ಅನುಮತಿ ನಿರಾಕರಿಸಿದ ವಿಚಾರವನ್ನು ಪ್ರಸ್ತಾಪಿಸಿದ ಸಚಿವರು, ಕೇಂದ್ರ ವೈಯಕ್ತಿಕವಾಗಿ ತಮಗೆ ಅವಕಾಶ ನಿರಾಕರಿಸಲಾಗಿದೆ, ರಾಜ್ಯದ ಸಚಿವರಿಗೆ ನಿರಾಕರಿಸಲಾಗಿದೆ ಇದರಿಂದ ರಾಜ್ಯಕ್ಕೆ ನಿರೀಕ್ಷಿತ ಬಂಡವಾಳ ಬರುವುದು ನಿಂತುಹೋಗಿದೆ. ಬಿಜೆಪಿಯವರಿಗೆ ನನ್ನ ಮೇಲೆ ಯಾಕೋ ಪ್ರೀತಿ ಜಾಸ್ತಿಯಾಗಿದೆ ಎಂದು ಹೀಗೆ ಮಾಡಬಹುದಿತ್ತು.
ಕಲಬುರಗಿಯಲ್ಲಿ ಪೌರಕಾರ್ಮಿಕರಿಗಾಗಿ ಭವನ ನಿರ್ಮಾಣಕ್ಕಾಗಿ ಅಗತ್ಯ ಅನುದಾನವನ್ನು ಒದಗಿಸುವಂತೆ ಸಚಿವರಿಗೆ ಒತ್ತಾಯಿಸಿದ ಕಮಕನೂರು ಅವರು ಎಂಪಿ ರಾಧಾಕೃಷ್ಣ ದೊಡ್ಡಮನಿ ಅವರು ಕಬ್ಬಲಿಗ ಸಮಾಜವನ್ನು ಎಸ್ಟಿ ಪಟ್ಟಿಗೆ ಸೇರಿಸುವಂತೆ ಕೇಂದ್ರವನ್ನು ಸಂಸತ್ತಿನಲ್ಲಿ ಒತ್ತಾಯಿಸಲು ಮನವಿ ಮಾಡಿದರು.
ವೇದಿಕೆಯ ಮೇಲೆ ಪೂಜ್ಯ ಮಹಾಪೌರ ಯಲ್ಲಪ್ಪ ನಾಯಕೋಡಿ, ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ತಿಪ್ಪಣ್ಣಪ್ಪ ಕಮಕನೂರು, ಬಾಬುರಾವ್ ಚಿಂಚನಸೂರು, ಕುಡಾ ಅಧ್ಯಕ್ಷ ಮಜರ್ ಆಲಂಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಪಂ ಸಿಐಒ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಕಮಿಷನರ್ ಅವಿನಾಶ್ ಶಿಂಧೆ, ಸಚಿನ್ ಶಿರವಾಳ ಸೇರಿದಂತೆ ಹಲವರಿದ್ದರು.
ಹಿಂದೂಸ್ತಾನ್ ಸಮಾಚಾರ್ / Samarth biral