ವಿದ್ಯುತ್ ಸಮಸ್ಯೆ ನಿವಾರಣೆಗೆ ರೈತ ಸಂಘದ ಒತ್ತಾಯ
ವಿದ್ಯುತ್ ಸಮಸ್ಯೆ ನಿವಾರಣೆಗೆ ರೈತ ಸಂಘದ ಒತ್ತಾಯ
ರೈತ ಮುಖಂಡ ಗಣೇಶ್‌ಗೌಡ


ಕೋಲಾರ, ಜೂನ್ ೨೪ (ಹಿ.ಸ) :

ಆ್ಯಂಕರ್ : ಬೇತಮಂಗಲ ಮಾರ್ಗದ ಎಫ್-೦೧, ಎಫ್-೭ ವಿದ್ಯುತ್ ಸಂಪರ್ಕದಲ್ಲಿ ಆಗುತ್ತಿರುವ ಸಮಸ್ಯೆಗಳಿಂದ ರೈತರಿಗೆ ಮತ್ತು ಸಾರ್ವಜನಿಕರಿಗೆ ತುಂಬಾ ಅನನುಕೂಲವಾಗುತ್ತಿದೆ ಎಂದು ನಮ್ಮ ಕೋಲಾರ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ಕೋಟಿಗಾನಹಳ್ಳಿ ಗಣೇಶ್‌ಗೌಡ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೇತಮಂಗಲ ಮಾರ್ಗದ ಚಾಮರಹಳ್ಳಿ, ಹರಟಿ, ಕೋಟಿಗಾನಹಳ್ಳಿ ಸೇರಿದಂತೆ ಇನ್ನಿತರೆ ಗ್ರಾಮಗಳಲ್ಲಿ ಅಸಮರ್ಪಕ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ರೈತರು ತುಂಬಾ ನಷ್ಟಕ್ಕೆ ತುತ್ತಾಗುತ್ತಿದ್ದಾರೆ. ತಾವು ಬೆಳೆದ ಬೆಳೆಗಳಿಗೆ ಸರಿಯಾಗಿ ನೀರು ಹರಿಸಲಾಗದೆ ಬೆಳೆಗಳು ಒಣಗುತ್ತಿವೆ. ಇನ್ನು ಶಾಲಾ ಕಾಲೇಜು ಮಕ್ಕಳ ವಿದ್ಯಾಭ್ಯಾಸಕ್ಕೆ ತುಂಬಾ ತೊಂದರೆಯಾಗುತ್ತಿದೆ. ಈಗಾಗಲೇ ಹಲವು ಬಾರಿ ಬೆಸ್ಕಾಂ ಇಲಾಖೆಯ ಮುಂದೆ ಪ್ರತಿಭಟನೆಗಳನ್ನು ಮಾಡಿ ಮನವಿಗಳನ್ನು ನಿಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಇಲಾಖೆಯ ಅಧಿಕಾರಿಗಳು ರೈತರ ವ್ಯವಸಾಯದ ಜಮೀನುಗಳಲ್ಲಿ ಯಾವುದೇ ಮುನ್ಸೂಚನೆ ನೀಡದೆ ಅವರಿಗೆ ಇಷ್ಟ ಬಂದ ಕಡೆ ಎಲ್ಲಂದರಲ್ಲಿ ವಿದ್ಯುತ್ ಕಂಬಗಳನ್ನು ಅಳವಡಿಸಿ ತೊಂದರೆ ಮಾಡುತ್ತಿದ್ದಾರೆ. ತೊಂದರೆಗೊಳಗಾದ ರೈತರುಗೆ ನಷ್ಟ ಪರಿಹಾರ ಕಲ್ಪಿಸಿಕೊಡಬೇಕು. ಇನ್ನಾದರೂ ಎಚ್ಚೆತ್ತುಕೊಂಡು ಸಮರ್ಪಕ ವಿದ್ಯುತ್ ಸರಬರಾಜಿಗೆ ಮುಂದಾಗಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಚಿತ್ರ; ರೈತ ಮುಖಂಡ ಗಣೇಶ್‌ಗೌಡ

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande