ಅಂಚೆ ಇಲಾಖೆ : ಸುಧಾರಿತ ಹಾಗೂ ವೇಗದ ಸೇವೆಗೆ ತಂತ್ರಾಂಶ ಬಳಕೆ
ಬಳ್ಳಾರಿ, 24 ಜೂನ್ (ಹಿ.ಸ.) : ಆ್ಯಂಕರ್ : ಅಂಚೆ ಇಲಾಖೆಯಲ್ಲಿ `ಅಡ್ವಾನ್ಸಡ್ ಪೋಸ್ಟಲ್ ಟೆಕ್ನಾಲಜಿ’ಯ ಬಳಸಿ ಸುಧಾರಿತ ಹಾಗೂ ತೃಪ್ತಿದಾಯಕವಾದ ಸೇವೆಗಳನ್ನು ನೀಡುವಲ್ಲಿ ಪ್ರಮುಖ ಪಾತ್ರವಹಿಸಲಾಗುತ್ತಿದೆ ಎಂದು ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ತಿಳಿಸಿದ್ದಾರೆ. ಪ್ರಧಾನ ಅಂಚೆ ಕಚೇರಿಯಲ್ಲಿ ಬಳ್ಳಾರಿ ಅ
ಅಂಚೆ ಇಲಾಖೆ : ಸುಧಾರಿತ ಹಾಗೂ ವೇಗದ ಸೇವೆಗೆ ತಂತ್ರಾಂಶ ಬಳಕೆ


ಅಂಚೆ ಇಲಾಖೆ : ಸುಧಾರಿತ ಹಾಗೂ ವೇಗದ ಸೇವೆಗೆ ತಂತ್ರಾಂಶ ಬಳಕೆ


ಬಳ್ಳಾರಿ, 24 ಜೂನ್ (ಹಿ.ಸ.) :

ಆ್ಯಂಕರ್ : ಅಂಚೆ ಇಲಾಖೆಯಲ್ಲಿ `ಅಡ್ವಾನ್ಸಡ್ ಪೋಸ್ಟಲ್ ಟೆಕ್ನಾಲಜಿ’ಯ ಬಳಸಿ ಸುಧಾರಿತ ಹಾಗೂ ತೃಪ್ತಿದಾಯಕವಾದ ಸೇವೆಗಳನ್ನು ನೀಡುವಲ್ಲಿ ಪ್ರಮುಖ ಪಾತ್ರವಹಿಸಲಾಗುತ್ತಿದೆ ಎಂದು ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ತಿಳಿಸಿದ್ದಾರೆ.

ಪ್ರಧಾನ ಅಂಚೆ ಕಚೇರಿಯಲ್ಲಿ ಬಳ್ಳಾರಿ ಅಂಚೆ ವಿಭಾಗದ ಬಳ್ಳಾರಿ ಪ್ರಧಾನ ಅಂಚೆ ಕಚೇರಿ ಹಾಗೂ ಅದರಡಿ ಬರುವ ಎಲ್ಲಾ ಉಪ ಅಂಚೆ ಕಚೇರಿಗಳು ಮತ್ತು ಶಾಖಾ ಅಂಚೆ ಕಚೇರಿಗಳಲ್ಲಿ ಎಪಿಟಿ 2.0 ತಂತ್ರಾಂಶ ಅಳವಡಿಕೆಯನ್ನು ಮಂಗಳವಾರ ನೆರವೇರಿಸಿ ಅವರು ಮಾತನಾಡಿದರು.

ಕರ್ನಾಟಕದ ಮೈಸೂರುನಲ್ಲಿರುವ ‘ಸೆಂಟರ್ ಫಾರ್ ಎಕ್ಸಲೆನ್ಸ್ ಇನ್ ಪೋನ್ಸಲ್ ಟೆಕ್ನಾಲಜಿ’ಯ ತಾಂತ್ರಿಕ ವಿಭಾಗದ ನುರಿತ ಸಿಬ್ಬಂದಿ ವರ್ಗದವರೇ ರೂಪುಗೊಳಿಸಿರುವ ಅತ್ಯಂತ ಸುಧಾರಿತ ಮತ್ತು ಗ್ರಾಹಕ ಸ್ನೇಹಿ ತಂತ್ರಾಂಶವನ್ನು ದೇಶದ ಎಲ್ಲಾ ಅಂಚೆ ಕಚೇರಿಗಳಲ್ಲಿ ಅಳವಡಿಸಿಕೊಳ್ಳಲು ಮುಂದಾಗಿದೆ ಎಂದು ತಿಳಿಸಿದರು.

ಜೂನ್ 23ರ ಸೋಮವಾರದಿಂದ ಬಳ್ಳಾರಿ ಅಂಚೆ ವಿಭಾಗದ ವ್ಯಾಪ್ತಿಗೆ ಬರುವ ಎಲ್ಲಾ ಅಂಚೆ ಕಚೇರಿಗಳಲ್ಲಿ ಈ ತಂತ್ರಾಂಶದ ಬಳಕೆ ಪ್ರಾರಂಭವಾಗಿದೆ. ಹೊಸ ತಂತ್ರಾಂಶದಲ್ಲಿ ಅಂಚೆ ಇಲಾಖೆಯ ಗ್ರಾಹಕರು ತಮ್ಮ ಮನೆಯಿಂದಲೇ ಕಾಗದ ಪತ್ರಗಳನ್ನು ಬುಕ್ ಮಾಡಿಕೊಳ್ಳಬಹುದು. ಅಲ್ಲದೇ, ತಮ್ಮ ಮನೆಯಿಂದಲೇ ಅಂಚೆ ಕಚೇರಿಯ ಪಿಕ್-ಅಪ್ ಸೇವೆಯನ್ನು ಸಹ ಬಳಸಿಕೊಳ್ಳಬಹುದು. ಇದು ಅತ್ಯಂತ ಆಕರ್ಷಣೀಯವಾದ ಹಾಗೂ ಗ್ರಾಹಕೋಪಯೋಗಿ ಸೇವೆಯಾಗಿದೆ ಎಂದರು.

ಜೂನ್ 24ರ ಮಂಗಳವಾರದಿಂದ ಬಳ್ಳಾರಿಯ ಪ್ರಧಾನ ಅಂಚೆ ಕಚೇರಿಯಲ್ಲಿ ‘ಸಂಜೆ ಅಂಚೆ’ ಎನ್ನುವ ಹೊಸ ಸೇವೆ ಪ್ರಾರಂಭವಾಗಿದೆ. ಗ್ರಾಹಕರು ಸಂಜೆ 04 ರಿಂದ 7.30 ರ ವರೆಗೆ ತಮ್ಮ ಸ್ಪೀಡ್ ಪೋಸ್ಟ್, ರೆಜಿಸ್ಟರ್ಡ್ ಕಾಗದ ಪತ್ರಗಳು, ಪಾರ್ಸಲ್ ಗಳನ್ನು ಕಳುಹಿಸಲು ಮತ್ತು ಅಂಚೆ ಚೀಟಿಗಳನ್ನು ಖರೀದಿಸಲು ಈ ಸೇವೆಯನ್ನು ಉಪಯೋಗಿಸಿಕೊಳ್ಳಬಹುದಾಗಿದೆ ಎಂದು ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ತಿಳಿಸಿದರು.

ಬಳ್ಳಾರಿ ಪ್ರಧಾನ ಅಂಚೆ ಕಚೇರಿಯ ಅಂಚೆ ಪಾಲಕರಾದ ಭೀಮಸೇನ ಜೋಶಿ, ಸಹಾಯಕ ಅಂಚೆ ಪಾಲಕರಾದ ರಾಜಶೇಖರ, ವಿ.ತಿಂದಪ್ಪ ಮತ್ತು ನಾಗಭೂಷಣ, ಲೆಕ್ಕಪಾಲಕರಾದ ರಾಮಪ್ರಸಾದ, ತಾಂತ್ರಿಕ ಪರಿಣಿತರಾದ ಶರತ್ ಕುಮಾರ್, ಪ್ರತಾಪ್ ರೆಡ್ಡಿ, ಪ್ರತಾಪ್ ನಾಯಕ, ಪ್ರಧಾನ ಅಂಚೆ ಕಚೇರಿಯ ಎಲ್ಲಾ ಅಂಚೆ ಸಹಾಯಕರು, ಅಂಚೆ ಪೇದೆಗಳು, ಎಂಟಿಎಸ್ ಹಾಗೂ ಜಿಡಿಎಸ್ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande