ಕೃಷಿ ಇಲಾಖೆಯಿಂದ ನಾನಾ ಬೆಳೆ ವಿಮೆಗೆ ಅರ್ಜಿ ಆಹ್ವಾನ
ರಾಯಚೂರು, 25 ಜೂನ್ (ಹಿ.ಸ.) : ಆ್ಯಂಕರ್ : ಕೃಷಿ ಇಲಾಖೆಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅರ್ಹ ರೈತರಿಂದ ಬೆಳೆ ವಿಮೆಗೆ ನೋಂದಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಹಲವಾರು ಅಪಾಯಗಳಿಂದ ಬೆಳೆ ನಷ್ಟವಾದಾಗ ರೈತರನ್ನು ರಕ್ಷಿಸುವ ಮಧ
ಕೃಷಿ ಇಲಾಖೆಯಿಂದ ನಾನಾ ಬೆಳೆ ವಿಮೆಗೆ ಅರ್ಜಿ ಆಹ್ವಾನ


ರಾಯಚೂರು, 25 ಜೂನ್ (ಹಿ.ಸ.) :

ಆ್ಯಂಕರ್ : ಕೃಷಿ ಇಲಾಖೆಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅರ್ಹ ರೈತರಿಂದ ಬೆಳೆ ವಿಮೆಗೆ ನೋಂದಣೆಗೆ ಅರ್ಜಿ ಆಹ್ವಾನಿಸಲಾಗಿದೆ.

ಹಲವಾರು ಅಪಾಯಗಳಿಂದ ಬೆಳೆ ನಷ್ಟವಾದಾಗ ರೈತರನ್ನು ರಕ್ಷಿಸುವ ಮಧ್ಯಮ ಬೆಳೆ ವಿಮೆಯಾಗಿರುತ್ತದೆ. ಪ್ರಸ್ತುತ ಸಾಲು ಮತ್ತು ಹಂಗಾಮಿನಲ್ಲಿ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ ಸಂಧರ್ಭದಲ್ಲಿ ಬೆಳೆ ನಷ್ಟ ಉಂಟಾದಲ್ಲಿ ವೈಯುಕ್ತಿಕ ನಷ್ಟದ ನಿರ್ವಹಣೆಗಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಯನ್ನು ಅಧಿಸೂಚಿಸಲಾಗಿದೆ.

ಯೋಜನೆಯ ವ್ಯಾಪ್ತಿ: 2025-26ನೇ ಸಾಲಿನಿಂದ ಪರಿಷ್ಕರಿಸಿದ ಪಿಎಮ್‍ಎಫ್‍ಬಿವೈ (pmfby) ಮಾರ್ಗಸೂಚಿಯನ್ವಯ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಲ್ಲಿ ಒಳಪಡಿಸಲಾಗುವುದು. ಅದರಂತೆ, ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಪಡದೇ ಇದ್ದಲ್ಲಿ ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಿದ್ದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು. ಈ ಕುರಿತು ಸಂಬಂಧಿಸಿದ ಬ್ಯಾಂಕ್‍ಗಳಿಗೆ ಭೇಟಿ ನೀಡಬಹುದಾಗಿದೆ.

ಬೆಳೆ ಸಾಲ ಪಡೆಯದ ರೈತರು ಅಂದಾಜು ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲಿ ಈ ಯೋಜನೆಯಲ್ಲಿ ಪಾಲ್ಗೊಳ್ಳಬಹುದು. ಈ ಯೋಜನೆಯಡಿಯಲ್ಲಿ ಬೆಳೆ ಸಾಲ ಪಡೆಯದ ರೈತರು ಅಂದಾಜು ಅಥವಾ ಉಪೇಕ್ಷಿತ ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲಿ ಪಾಲ್ಗೊಳ್ಳಬಹುದು. ಬೆಳೆ ವಿಮೆಗೆ ನೋಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ನಿಗಧಿಪಡಿಸಿದ ಅವಧಿಯೊಳಗಾಗಿ ನೋಂದಾಯಿಸಿದ ಆರ್ಥಿಕ ಸಂಸ್ಥೆಗಳಲ್ಲಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸತಕ್ಕದ್ದು. ಅಂತಹ ಸಂದರ್ಭದಲ್ಲಿ ಹೆಚ್ಚುವರಿ ವಿಮಾ ಕಂತಿನ ವ್ಯತ್ಯಾಸದ ಮೊತ್ತವನ್ನು ರೈತರು ಭರಿಸತಕ್ಕದ್ದು ಅಥವಾ ಹೆಚ್ಚುವರಿ ವಿಮಾ ಕಂತನ್ನು ಪಾವತಿಸಿದ್ದಲ್ಲಿ ರೈತರಿಗೆ ಮರುಪಾವತಿಸಲಾಗುತ್ತದೆ.

ರಾಯಚೂರು ಜಿಲ್ಲೆಯಲ್ಲಿ ಭತ್ತ (ಮಳೆಯಾಶ್ರೀತ) 312.18ರೂ., ಹತ್ತಿ (ನೀರಾವರಿ) 1492.33 ರೂ., ಹತ್ತಿ (ಮಳೆಯಾಶ್ರೀತ) 1006.69ರೂ., ತೊಗರಿ (ನೀರಾವರಿ) 406.72 ರೂ., ತೊಗರಿ (ಮಳೆಯಾಶ್ರೀತ) 388.51 ರೂ., ಸೂರ್ಯಕಾಂತಿ (ಮಳೆಯಾಶ್ರೀತ) 329.83ರೂ., ನೆಲಗಡಲೆ (ನೀರಾವರಿ) 505.57ರೂ., ನೆಲಗಡಲೆ (ಮಳೆಯಾಶ್ರೀತ) 441.12ರೂ., ಸಜ್ಜೆ (ನೀರಾವರಿ) 317.69 ರೂ., ಸಜ್ಜೆ (ಮಳೆಯಾಶ್ರೀತ) 220.54ರೂ., ಎಳ್ಳು (ಮಳೆಯಾಶ್ರೀತ) 232.7 ರೂ., ಹೆಸರು (ಮಳೆಯಾಶ್ರೀತ) 269.13 ರೂ.ಗಳನ್ನು ಜುಲೈ 31ರೊಳಗಾಗಿ ರೈತರು ವಿಮಾ ಮಾಡಿಸಬಹುದಾಗಿದೆ.

ಭತ್ತ (ನೀರಾವರಿ) 754.77 ರೂ., ಮುಸುಕಿನ ಜೋಳ (ನೀರಾವರಿ) 522.06 ರೂ., ಈರುಳ್ಳಿ (ನೀರಾವರಿ) 218.27 ರೂ., ಸೂರ್ಯಕಾಂತಿ (ನೀರಾವರಿ) 394.58 ರೂ.ಗಳನ್ನು ಆಗಸ್ಟ್ 16ರೊಳಗಾಗಿ ರೈತರು ವಿಮಾ ಮಾಡಿಸಬಹುದಾಗಿದೆ.

2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಯಚೂರು ಜಿಲ್ಲೆಗೆ ಯುನಿವರ್ಸಲ್ ಸೊಂಪೆÇ ಜನರಲ್ ಇನ್ಸೂರೆನ್ಸ್ ಕಂ. ಲಿ ಮಿಟೆಡ್ ಸಂಸ್ಥೆಯು ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ರೈತರು ಪಹಣಿಯ ಪ್ರತಿ, ಬ್ಯಾಂಕ್ ಪಾಸಬುಕ್ ಪ್ರತಿ ಹಾಗೂ ಆಧಾರ ಪ್ರತಿ ಮತ್ತು ಕಡ್ಡಾಯವಾಗಿ ಎಫ್.ಐ.ಡಿ, ವಿವರಗಳೊಂದಿಗೆ ನಿಗಧಿತ ದಿನಾಂಕದೊಳಗಾಗಿ ಹತ್ತಿರದ ಗ್ರಾಮ ಓನ್, ಕರ್ನಾಟಕ ಓನ್, ಸಿಎಸ್ ಸಿ ಸೆಂಟರ್ಸ್ ಮತ್ತು ಬ್ಯಾಂಕ್ ಶಾಖೆಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರು ಕಚೇರಿಗೆ ಭೇಟಿ ನೀಡಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande