ಕೆಆರ್‌ಎಸ್ ಜಲಾಶಯ ಭರ್ತಿಗೆ ಕ್ಷಣಗಣನೆ
ಮಂಡ್ಯ, 25 ಜೂನ್ (ಹಿ.ಸ.) : ಆ್ಯಂಕರ್ : ಕೆಆರ್‌ಎಸ್ ಜಲಾಶಯವು ಭರ್ತಿಯಾಗಲು ಕೆಲ ಅಡಿಗಳಷ್ಟು ಬಾಕಿ ಇರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದ್ದು, ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಕೆಆರ್‌ಎಸ್‌ ಜಲಾಶಕ್ಕೆ ಒಳ ಹರಿ
Krs


ಮಂಡ್ಯ, 25 ಜೂನ್ (ಹಿ.ಸ.) :

ಆ್ಯಂಕರ್ : ಕೆಆರ್‌ಎಸ್ ಜಲಾಶಯವು ಭರ್ತಿಯಾಗಲು ಕೆಲ ಅಡಿಗಳಷ್ಟು ಬಾಕಿ ಇರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದ್ದು, ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಕೆಆರ್‌ಎಸ್‌ ಜಲಾಶಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಹೊರ ಹರಿವಿನ ಪ್ರಮಾಣವನ್ನು ಯಾವುದೇ ಸಂದರ್ಭದಲ್ಲೂ ಹೆಚ್ಚಿಸಬಹುದು. ಹೀಗಾಗಿ, ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ಕಾವೇರಿ ನೀರಾವರಿ ನಿಗಮ ಎಚ್ಚರಿಕೆ ನೀಡಿದೆ.

ಪ್ರಸ್ತುತ 17 ಸಾವಿರ ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದ್ದು. ಈ ಪ್ರಮಾಣವು ಯಾವುದೇ ಸಂದರ್ಭದಲ್ಲೂ 30,000 ಕ್ಯೂಸೆಕ್‌ಗೆ ಹೆಚ್ಚಾಗಬಹುದು. ಇದರಿಂದ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶಗಳು ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಜನರು ಎಚ್ಚರ ವಹಿಸಬೇಕು. ತಮ್ಮ ಆಸ್ತಿಪಾಸ್ತಿ, ಜಾನುವಾರುಗಳ ರಕ್ಷಣೆಗೆ ಕ್ರಮ ವಹಿಸಬೇಕು ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್‌ ಕೆ.ರಘುರಾಮ್‌ ತಿಳಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೂ ಪ್ರವಾಸಿಗರ ನಿಷೇಧ ಹೇರಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande