ಹಲ್ದ್ವಾನಿ, 25 ಜೂನ್ (ಹಿ.ಸ.) :
ಆ್ಯಂಕರ್ : ಉತ್ತರಾಖಂಡದ ಹಲ್ದ್ವಾನಿಯಲ್ಲಿ ಭಾರೀ ಮಳೆಗೆ ತುಂಬಿದ ನೀರಾವರಿ ಕಾಲುವೆಗೆ ಕಾರು ಬಿದ್ದ ಪರಿಣಾಮ, ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಧಮ್ ಸಿಂಗ್ ನಗರದ ಕಿಚ್ಚಾದ ನಿವಾಸಿಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭಾರಿ ಮಳೆಗೆ ಕಾರು ನಿಯಂತ್ರಣ ತಪ್ಪಿ ಅಗ್ನಿಶಾಮಕ ಕಚೇರಿ ಹಿಂಭಾಗದ ಕಾಲುವೆಗೆ ಬಿದ್ದಿತು. ಕಾರು ತಲೆಕೆಳಗಾಗಿ ತಿರುಗಿ ಸೇತುವೆ ಅಡಿಯಲ್ಲಿ ಸಿಲುಕಿದ್ದರಿಂದ ಒಳಗೆ ನೀರು ನುಗ್ಗಿ ನಾಲ್ವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಕಾರನ್ನು ಹೊರತೆಗೆದು ಮೂವರನ್ನು ರಕ್ಷಣೆ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa