ಹಾವೇರಿ, 25 ಜೂನ್ (ಹಿ.ಸ.) :
ಆ್ಯಂಕರ್ : ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಮಂಗಳವಾರ ನಡೆದ ಗುತ್ತಿಗೆದಾರ ಶಿವಾನಂದ ಕುನ್ನೂರ ಕೊಲೆ ಪ್ರಕರಣದ ಆರೋಪಿಯ ಮನೆಗೆ ತಡ ರಾತ್ರಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಪ್ರಮುಖನಾದ ನಾಗರಾಜ ಸವದತ್ತಿ ಮನೆಗೆ ಬೆಂಕಿ ಹಚ್ಚಲಾಗಿದೆ. ಗುತ್ತಿಗೆದಾರ ಶಿವಾನಂದ ಕಡೆಯವರೇ ಬೆಂಕಿ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಇರುವ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಸಾವು, ನೋವು ಸಂಭವಿಸಿಲ್ಲ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa