ಕೊಪ್ಪಳ, 25 ಜೂನ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ತಾಲ್ಲೂಕಿನ ಹಿರೇಸಿಂದೋಗಿ ಗ್ರಾಮದ ಹಿರೇಹಳ್ಳ ವ್ಯಾಪ್ತಿಯಲ್ಲಿ ನಡೆದಿದ್ದ ಅನಧಿಕೃತ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ವಿರುದ್ದ ಸಾರ್ವಜನಿಕ ದೂರಿನ ಮೇರೆಗೆ ತಾಲ್ಲೂಕ ಮರಳು ಉಸ್ತುವಾರಿ ಸಮಿತಿಯಿಂದ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಈ ಕುರಿತು ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಅನಧಿಕೃತ ಮರಳು ಗಣಿಗಾರಿಕೆಗೆ ಬಳಸುವ ಬೋಟ್ ಮತ್ತು ಇತರೆ ಸಾಧನಗಳು ಪರಿಕರಗಳನ್ನು ಹಾಗೂ ಅಕ್ರಮವಾಗಿ ಹಳ್ಳದ ಪಾತ್ರದಲ್ಲಿ ಶೇಖರಿಸಿಡಲಾದ ಮರಳಿನ ಗುಡ್ಡೆಗಳನ್ನು ನಾಶಪಡಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದನ್ವಯ ಅಕ್ರಮವಾಗಿ ಮರಳು ಗಣಿಗಾರಿಕೆಯಲ್ಲಿ ತೊಡಗಿದ ವ್ಯಕ್ತಿಗಳ ವಿರುದ್ದ ಹಾಗೂ ಸಹಕಾರ ನೀಡಿದ ವ್ಯಕ್ತಿಗಳ ವಿರುದ್ದ ಸಂಬಂಧಿತ ಪ್ರದೇಶದ ವ್ಯಾಪ್ತಿಯ ಅಳವಂಡಿ ಪೊಲೀಸ್ ಠಾಣೆಯಲ್ಲಿ ಜೂನ್ 24 ರಂದು ಪ್ರಕರಣ ದಾಖಲಿಸಲಾಗಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಪರಿಸರ ಇಲಾಖೆ ಮತ್ತು ಅರಣ್ಯ ಇಲಾಖೆ, ಗ್ರಾಮ ಪಂಚಾಯತಿ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿ/ ಸಿಬ್ಬಂದಿಗಳೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು ಎಂದು ಹಿರಿಯ ಭೂವಿಜ್ಞಾನಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಪುಷ್ಪಲತಾ ಅವರು ತಿಳಿಸಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್