ನವದೆಹಲಿ, 25 ಜೂನ್ (ಹಿ.ಸ.) :
ಆ್ಯಂಕರ್ : 1975ರ ತುರ್ತು ಪರಿಸ್ಥಿತಿಗೆ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ, 'ಸಂವಿಧಾನ ಹತ್ಯೆ ದಿವಸ್' ಇಂದು ದೆಹಲಿಯ ತ್ಯಾಗರಾಜ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 'ಲೋಕತಂತ್ರ ಅಮರ್ ರಹೇ ಯಾತ್ರೆ'ಗೆ ಚಾಲನೆ ನೀಡಲಿದ್ದಾರೆ.
ಈ ಯಾತ್ರೆಯು ದೇಶದಾದ್ಯಂತ ಸಂಚರಿಸಿ ಸಂವಿಧಾನಿಕ ಮೌಲ್ಯಗಳು ಮತ್ತು ತುರ್ತು ಪರಿಸ್ಥಿತಿಯಿಂದ ಕಲಿತ ಪಾಠಗಳ ಬಗ್ಗೆ ಜಾಗೃತಿ ಮೂಡಿಸಲಿದೆ. ಕಾರ್ಯಕ್ರಮವನ್ನು ಕೇಂದ್ರ ಸಂಸ್ಕೃತಿ ಸಚಿವಾಲಯ ಹಾಗೂ ದೆಹಲಿ ಸರ್ಕಾರ ಜಂಟಿಯಾಗಿ ಆಯೋಜಿಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa