ಕಲ್ಬುರ್ಗಿ, 25 ಜೂನ್ (ಹಿ.ಸ.) :
ಆ್ಯಂಕರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ಪಟ್ನಾ ಬಳಿ ಇರುವ ಡ್ರೈವರ್ ಧಾಬಾದಲ್ಲಿ ತಡರಾತ್ರಿ ನಡೆದಿದೆ.
ಸಿದ್ದು 35, ಜಗನ್ನಾಥ 28, ರಾಮಣ್ಣ 40 ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಹಳೇ ವೈಷಮ್ಯ ಹಿನ್ನಲೆ ದಾಬಾಗೆ ನುಗ್ಗಿ ಭೀಕರ ಹತ್ಯೆ ನಡೆದಿದ್ದು, ಕೊಲೆಯಾದ ಮೂರು ವರ್ಷಗಳ ನಂತರ, ಧಾಭಾದಲ್ಲಿ ಕೆಲಸ ಮಾಡುತ್ತಿದ್ರು. ಈ ವೇಳೆ ದುಷ್ಕರ್ಮಿಗಳು ದಾಬಾಗೆ ನುಗ್ಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಪ್ರಿಯಾಂಕಾ ಹೊಸಮನಿ