ರಾಯಚೂರು, 25 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಜುಲೈ 02 ರಂದು ಡಾ.ಫು.ಗು.ಹಳಕಟ್ಟಿ ಜಯಂತಿ ಹಾಗೂ ಜುಲೈ 10 ರಂದು ಹಡಪದ ಅಪ್ಪಣ್ಣ ಜಯಂತಿ ನಡೆಯಲಿವೆ.
ಈ ಜಯಂತಿ ಅಂಗವಾಗಿ ಜೂನ್ 27ರ ಸಂಜೆ 4ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು, ನಾನಾ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಬಹುದಾಗಿದೆ.
ಅಂದು ನಡೆಯುವ ಪೂರ್ವಭಾವಿ ಸಭೆಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜಿಲ್ಲೆಯ ನಾನಾ ಸಮಾಜದ ಮುಖಂಡರುಗಳು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್