ಬೆಂಗಳೂರು, 26 ಜೂನ್ (ಹಿ.ಸ.):
ಆ್ಯಂಕರ್:
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಡಳಿತದಲ್ಲಿ ಹಿಡಿತ ಕಳೆದುಕೊಂಡಿಲ್ಲ. ನಮಗೆ ಹೈಕಮಾಂಡ್ ಇದ್ದು, ಎಲ್ಲವನ್ನೂ ನೋಡಿಕೊಳ್ಳುತ್ತದೆ'' ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಡಳಿತದಲ್ಲಿ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ನಾನು ಎಲ್ಲರ ಜೊತೆ ಮಾತನಾಡುತ್ತೇನೆ. ಏನೂ ಸಮಸ್ಯೆ ಇಲ್ಲ. ಆಡಳಿತದಲ್ಲಿ ಹಿಡಿತ ಕಳೆದುಕೊಂಡಿಲ್ಲ ಎಂದರು.
ಬಿ.ಆರ್.ಪಾಟೀಲ್ ಭೇಟಿ ವಿಚಾರವಾಗಿ ಪಕ್ಷದ ಅಧ್ಯಕ್ಷನಾಗಿ ವಾಸ್ತವಾಂಶ ಕೇಳಬೇಕಿತ್ತು. ಅವರಿಗೆ ದೂರವಾಣಿ ಕರೆ ಮಾಡಿ ಕರೆಸಿದ್ದೆ. ಹಾಗಾಗಿ ಅವರು ಬಂದಿದ್ದರು. ಅವರ ವಿಚಾರ ಏನಿದೆ ಎಂಬುದನ್ನು ಹೇಳಿದ್ದಾರೆ. ನಾನು, ಮುಖ್ಯಮಂತ್ರಿ, ಸಚಿವ ಜಮೀರ್ ಜೊತೆ ಮಾತನಾಡುತ್ತೇನೆ. ವಾಸ್ತವಾಂಶ ಪರಿಶೀಲನೆ ಮಾಡುತ್ತೇನೆ. ಈ ಮಧ್ಯೆ ನಮ್ಮ ಪಕ್ಷದ ವರಿಷ್ಠರು ರಾಜ್ಯಕ್ಕೆ ಬರುತ್ತಿದ್ದಾರೆ. ಎಲ್ಲರ ಜೊತೆ ಮಾತನಾಡುತ್ತಾರೆ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa