ಬೆಂಗಳೂರು, 26 ಜೂನ್ (ಹಿ.ಸ.):
ಆ್ಯಂಕರ್:
ಜುಲೈ 4 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ದೇವನಹಳ್ಳಿ ಚನ್ನರಾಯಪಟ್ಟಣ ರೈತ ಹೋರಾಟಗಾರರು ಮತ್ತು ಸಂಯುಕ್ತ ಹೋರಾಟ ವೇದಿಕೆ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ.
ಇಂದು ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ರೈತ ಮುಖಂಡರ ಜೊತೆ ಈ ಬಗ್ಗೆ ಚರ್ಚಿಸಿದ ಮುಖ್ಯಮಂತ್ರಿಗಳು ಜುಲೈ 4ರ ಬೆಳಗ್ಗೆ 11 ಗಂಟೆಗೆ ರೈತರ ಬೇಡಿಕೆ ಮತ್ತು ಸಮಸ್ಯೆ ಕುರಿತಾಗಿ ಸಮಗ್ರ ಸಭೆ ನಡೆಸುವುದಾಗಿ ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa