ಕಬಿನಿ ಜಲಾಶಯದ ಹೊರ ಹರಿವು ಹೆಚ್ಚಳ
ಮೈಸೂರು, 26 ಜೂನ್ (ಹಿ.ಸ.) : ಆ್ಯಂಕರ್ : ಮೈಸೂರು ಜಿಲ್ಲೆಯ ಕಬಿನಿ ಅಣೆಕಟ್ಟೆಯಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಬಿಡಲಾಗುತ್ತಿದ್ದು, ತಗ್ಗು ಪ್ರದೇಶ‌ಗಳ ಜನರು ಎಚ್ಚರಿಕೆ ವಹಿಸುವಂತೆ​ ಸೂಚನೆ ನೀಡಲಾಗಿದೆ. ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜಲಾಶಯ ಭರ್ತಿಯ
Kabini


ಮೈಸೂರು, 26 ಜೂನ್ (ಹಿ.ಸ.) :

ಆ್ಯಂಕರ್ : ಮೈಸೂರು ಜಿಲ್ಲೆಯ ಕಬಿನಿ ಅಣೆಕಟ್ಟೆಯಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಬಿಡಲಾಗುತ್ತಿದ್ದು, ತಗ್ಗು ಪ್ರದೇಶ‌ಗಳ ಜನರು ಎಚ್ಚರಿಕೆ ವಹಿಸುವಂತೆ​ ಸೂಚನೆ ನೀಡಲಾಗಿದೆ.

ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜಲಾಶಯ ಭರ್ತಿಯಾಗುವ ಹಂತದಲ್ಲಿದೆ. ಸದ್ಯ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 20,000 ಕ್ಯೂಸೆಕ್​ಗೂ ಹೆಚ್ಚಿದ್ದು, 25,000 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.

ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇರುತ್ತದೆ. ಆದ್ದರಿಂದ, ನದಿ ಪಾತ್ರದ ಮತ್ತು ನದಿಯ ಎರಡೂ ದಂಡೆಗಳಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande