ಹಾಸನ, 26 ಜೂನ್ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಗ್ಗದ್ದೆ-ಮಾರನಹಳ್ಳಿ ಬಳಿ ಭೂಕುಸಿತ ಸಂಭವಿಸಿ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ನಿರಂತರ ಮಳೆಯ ಕಾರಣ ಭಾರಿ ಮಣ್ಣು ಕುಸಿದು ರಸ್ತೆ ಮೇಲೆ ಬಿದ್ದಿದ್ದು, ಬೆಂಗಳೂರು–ಮಂಗಳೂರು ಪ್ರಯಾಣದ ಮಾರ್ಗ ಬದಲಾಯಿಸಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಹೋಗುವವರು ಬೇಲೂರು ಮಾರ್ಗವಾಗಿ ಚಾರ್ಮಾಡಿ ಘಾಟ್ ಬಳಸಿ ಸಂಚರಿಸಬೇಕು.
ಮಂಗಳೂರಿನಿಂದ ಬೆಂಗಳೂರಿಗೆ ಬರುವವರು ಕೊಡಗಿನ ಸಂಪಾಜೆ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa