ಎಸ್ ಸಿಒ ಸಭೆಯಲ್ಲಿ ಪಾಕ್ ಭಯೋತ್ಪಾದನೆ ಬಹಿರಂಗ ಪಡಿಸಿದ ರಾಜನಾಥ್ ಸಿಂಗ್
ನವದೆಹಲಿ, 26 ಜೂನ್ (ಹಿ.ಸ.): ಆ್ಯಂಕರ್: ಚೀನಾದ ಕ್ವಿಂಗ್ಡಾವೊದಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ರಕ್ಷಣಾ ಸಚಿವರ ಸಭೆಯಲ್ಲಿ ಭಾರತ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಯೋತ್ಪಾದನೆಯ ವಿರುದ್ಧ ಕಠಿಣ ನಿಲುವು ಪ್ರಕಟಿಸಿದರು. ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನಾ ಕೇಂದ್ರಗಳ ವಿರುದ್ಧ ಭಾರತ ನಡೆಸಿದ ''ಆ
Rajnath singh


ನವದೆಹಲಿ, 26 ಜೂನ್ (ಹಿ.ಸ.):

ಆ್ಯಂಕರ್:

ಚೀನಾದ ಕ್ವಿಂಗ್ಡಾವೊದಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ರಕ್ಷಣಾ ಸಚಿವರ ಸಭೆಯಲ್ಲಿ ಭಾರತ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಯೋತ್ಪಾದನೆಯ ವಿರುದ್ಧ ಕಠಿಣ ನಿಲುವು ಪ್ರಕಟಿಸಿದರು. ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನಾ ಕೇಂದ್ರಗಳ ವಿರುದ್ಧ ಭಾರತ ನಡೆಸಿದ 'ಆಪರೇಷನ್ ಸಿಂಧೂರ್' ವಿವರಿಸುತ್ತಾ, ಅವರು ಪಹಲ್ಗಾಮ್ ದಾಳಿಯ ಕುರಿತು ಸದಸ್ಯ ರಾಷ್ಟ್ರಗಳಿಗೆ ಮಾಹಿತಿ ನೀಡಿದರು.

ಭಯೋತ್ಪಾದನೆಗೆ ಆಶ್ರಯ ನೀಡುತ್ತಿರುವ ಕೆಲವು ದೇಶಗಳ ವಿರುದ್ಧ ಉಗ್ರ ಟೀಕೆ ವ್ಯಕ್ತಪಡಿಸಿದ ಅವರು, ಭಯೋತ್ಪಾದನಾ ಕೇಂದ್ರಗಳು ಇನ್ನು ಮುಂದೆ ಸುರಕ್ಷಿತವಲ್ಲ ಎಂದು ಎಚ್ಚರಿಸಿದರು. ಎಲ್ಲಾ ರೂಪದ ಭಯೋತ್ಪಾದನೆಯನ್ನೂ ಖಂಡಿಸುವಂತೆ ಅವರು ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದರು.

ಇತ್ತೀಚೆಗೆ ಡ್ರೋನ್, ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ ತಂತ್ರಜ್ಞಾನ ಬಳಕೆ ಭದ್ರತೆಗೆ ಸವಾಲಾಗುತ್ತಿದೆ ಎಂಬುದರ ಕುರಿತು ಚಿಂತನೆ ವ್ಯಕ್ತಪಡಿಸಿದ ಅವರು, ಯುವಜನರಲ್ಲಿ ಮೂಲಭೂತವಾದ ತಡೆಗೆ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande