ರಾಯಚೂರು, 26 ಜೂನ್ (ಹಿ.ಸ.) :
ಆ್ಯಂಕರ್ : ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ ಪ್ರಸ್ತುತ ಯಾವುದೇ ಬೋಧಕೇತರ ಹುದ್ದೆಗಳನ್ನು ನೇರ ನೇಮಕಾತಿ ಅಥವಾ ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುತ್ತಿರುವುದಿಲ್ಲ.
ಸರ್ಕಾರದಿಂದ ಮಂಜೂರಾದ ಹುದ್ದೆಗಳನ್ನು ಸರ್ಕಾರದ ಅನುಮತಿ ಮೇರೆಗೆ ಕೆಟಿಪಿಪಿ ನಿಯಮಾನುಸಾರ ಟೆಂಡರ್ ಪ್ರಕ್ರಿಯೆ ಮುಖಾಂತರ ಸೇವೆ ಪಡೆಯಲಾಗುವುದು.
ಇದನ್ನು ಹೊರತುಪಡಿಸಿ ಯಾವುದೇ ಮಧ್ಯವರ್ತಿಗಳ ಮೂಲಕವಾಗಲೀ ಅಥವಾ ಏಜನ್ಸಿ ಮೂಲಕವಾಗಲೀ ಆಮಿಷಕ್ಕೆ ಒಳಗಾಗಿ ಯಾರು ಸಹ ಮೋಸ ಹೋಗದಿರುವಂತೆ ಸಾರ್ವಜನಿಕರಲ್ಲಿ ರಾಯಚೂರು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್