ಬಳ್ಳಾರಿ : ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸಹಿ ಸಂಗ್ರಹ ಚಳವಳಿ
ಬಳ್ಳಾರಿ, 26 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರದ ವಿವಿಧ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬಳ್ಳಾರಿ ನಾಗರೀಕರ ಹೋರಾಟ ಸಮಿತಿ ನೇತೃತ್ವದಲ್ಲಿ ಜೂನ್ 30 ರಿಂದ ಜೂಲೈ 23ರವರೆಗೆ ಸಹಿ ಸಂಗ್ರಹ ಚಳವಳಿ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚಿನ ಜನರು ಸಹಿ ಸಂಗ್ರಹದ ಗುರಿಯನ್ನು ಹೊಂದ
ಬಳ್ಳಾರಿ : ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸಹಿ ಸಂಗ್ರಹ ಚಳವಳಿ


ಬಳ್ಳಾರಿ, 26 ಜೂನ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ನಗರದ ವಿವಿಧ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬಳ್ಳಾರಿ ನಾಗರೀಕರ ಹೋರಾಟ ಸಮಿತಿ ನೇತೃತ್ವದಲ್ಲಿ ಜೂನ್ 30 ರಿಂದ ಜೂಲೈ 23ರವರೆಗೆ ಸಹಿ ಸಂಗ್ರಹ ಚಳವಳಿ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚಿನ ಜನರು ಸಹಿ ಸಂಗ್ರಹದ ಗುರಿಯನ್ನು ಹೊಂದಲಾಗಿದೆ ಎಂದು ಹೋರಾಟ ಸಮಿತಿ ಸಂಚಾಲಕ ಸೋಮಶೇಖರಗೌಡ ಅವರು ತಿಳಿಸಿದ್ದಾರೆ.

ಸುದ್ದಿಗಾರರಿಗೆ ಗುರುವಾರ ಮಾಹಿತಿ ನೀಡಿದ ಅವರು, ಜೂನ್ 30 ರಿಂದ ಜುಲೈ 23 ವರೆಗೆ ಕೌಲ್‍ಬಜಾರ್, ಮೋತಿ ಸರ್ಕಲ್, ದುರ್ಗಮ್ಮ ಗುಡಿ, ರಾಯಲ್ ಸರ್ಕಲ್ ಸೇರಿ ನಗರದ ಪ್ರಮುಖ ರಸ್ತೆಗಳು ಮತ್ತು ಸ್ಥಳಗಳಲ್ಲಿ ಸಾರ್ವಜನಿಕರಿಂದ ಒಂದು ಲಕ್ಷಕ್ಕೂ ಹೆಚ್ಚಿನ ಸಹಿಗಳನ್ನು ಸಂಗ್ರಹ ಮಾಡಲಾಗುತ್ತದೆ. ಜೂಲೈ 27 ರಂದು ನಡೆಸಲು ಉದ್ದೇಶಿಸಿರುವ ಬೃಹತ್ ನಾಗರೀಕರ ಸಮಾವೇಶದಲ್ಲಿ ಸಹಿ ಸಂಗ್ರಹದ ದಾಖಲೆಯನ್ನು ಸಂಬಂಧಿಸಿದವರಿಗೆ ಸಲ್ಲಿಸಲಾಗುತ್ತದೆ ಎಂದರು.

ಶುದ್ಧವಾದ ಕುಡಿಯುವ ನೀರಿನ ಪೂರೈಕೆ, ರಿಂಗ್ ರಸ್ತೆ ನಿರ್ಮಾಣ, ಮೋತಿ ಬ್ರಿಡ್ಜ್ ಅಗಲೀಕರಣ, ಸುಧಾ ಕ್ರಾಸ್ ಮೇಲ್ಸೇತುವೆ ತ್ವರಿತವಾಗಿ ನಿರ್ಮಾಣ ಮಾಡುವುದು ವಿವಿಧ ರಸ್ತೆಗಳ ದುರಸ್ತಿ, ವೃತ್ತಗಳ ನಿರ್ಮಾಣ ಮತ್ತು ಇನ್ನಿತರೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಆಗ್ರಹಿಸಿ ಈ ಸಹಿ ಸಂಗ್ರಹ ಚಳವಳಿಯನ್ನು ನಡೆಸಲಾಗುತ್ತದೆ ಎಂದರು.

ನಿವೃತ್ತ ಉಪನ್ಯಾಸಕರಾದ ಯು. ನರಸಣ್ಣ, ನಿವೃತ್ತ ಅಧಿಕಾರಿ ಮುರ್ತುಜಾಸಾಬ್, ಡಾ. ಎನ್. ಪ್ರಮೋದ್, ಎಸ್‍ಯುಸಿಐನ ಗೋವಿಂದ, ವಿದ್ಯಾ ಹಲವರು ಈ ಸಂದರ್ಭದಲ್ಲಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande