ರಾಜ್ಯ ಸರ್ಕಾರದ ಬಳಿ ಶ್ವೇತ ಪತ್ರ ಇಲ್ಲ : ಬಸವರಾಜ ಬೊಮ್ಮಾಯಿ
ಹಾವೇರಿ, 26 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ. ಇವರ ಬಳಿ ಶ್ವೇತ ಪತ್ರ ಇಲ್ಲ, ಬ್ಲ್ಯಾಕ್ ಪೇಪರ್ ಇದೆ. ರಾಜ್ಯ ಸರ್ಕಾರ ಪ್ರತಿ ವ್ಯಕ್ತಿ ಮೇಲೆ ಹೆಚ್ಚುವರಿಯಾಗಿ 1 ಲಕ್ಷ ರೂಪಾಯಿ ಸಾಲ ಹೊರೆಸುತ್ತಿದ್ದಾರೆ. ಇದಕ್ಕಿಂತ ದೊಡ್ಡ ಶ್ವೇತ ಪತ್ರ ಬೇಕಾ ಎಂದು ಸಂಸದ ಹಾಗೂ ಮಾ
Bommayi


ಹಾವೇರಿ, 26 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ. ಇವರ ಬಳಿ ಶ್ವೇತ ಪತ್ರ ಇಲ್ಲ, ಬ್ಲ್ಯಾಕ್ ಪೇಪರ್ ಇದೆ. ರಾಜ್ಯ ಸರ್ಕಾರ ಪ್ರತಿ ವ್ಯಕ್ತಿ ಮೇಲೆ ಹೆಚ್ಚುವರಿಯಾಗಿ 1 ಲಕ್ಷ ರೂಪಾಯಿ ಸಾಲ ಹೊರೆಸುತ್ತಿದ್ದಾರೆ. ಇದಕ್ಕಿಂತ ದೊಡ್ಡ ಶ್ವೇತ ಪತ್ರ ಬೇಕಾ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ‌.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸತ್ಯ ಹೇಳಿದ್ದಾರೆ, ಸುಳ್ಳನ್ನು ಎಷ್ಟು ದಿನ ಅಂತ ಮರೆಮಾಚಲು ಆಗುತ್ತದೆ ? ಸತ್ಯ ಹೊರಬರಲೇ ಬೇಕು, ಪರಮೇಶ್ವರ ಬಾಯಲ್ಲಿ ಬಂದರೆ ಶಿವನ ಬಾಯಲ್ಲಿ ಬಂದ ಹಾಗೆ ಎಂದು ಹೇಳಿದರು.

ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಶ್ವೇತ ಪತ್ರ ಹೊರಡಿಸಲು ಬಿಜೆಪಿ ಆಗ್ರಹಿಸುತ್ತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರದ ಬಳಿ ಶ್ವೇತ ಪತ್ರ ಇಲ್ಲ, ಬ್ಲಾಕ್ ಪೇಪರ್ ಇದೆ. ಆರ್ಥಿಕವಾಗಿ ಸರ್ಕಾರ ದಿವಾಳಿ ಆಗಿದೆ. ಎಲ್ಲಾ ದರಗಳು, ತೆರಿಗೆ ಹೆಚ್ಚಾಗಿದೆ. ಇದಕ್ಕಿಂತ ಶ್ವೇತ ಪತ್ರ ಬೇಕಾ? ಜನ ಪ್ರತಿನಿತ್ಯ ಅನುಭವಿಸುತ್ತಿದ್ದಾರೆ. ಪ್ರತಿ ಕುಟುಂಬದ ಮೇಲೆ ಪ್ರತಿ ವರ್ಷ 50 ಸಾವಿರ ರೂಪಾಯಿ ಹೊರೆ ಆಗುತ್ತಿದೆ. ಪ್ರತಿಯೊಂದು ಕುಟುಂಬದ ವ್ಯಕ್ತಿಯ ಮೇಲೆ ಹೆಚ್ಚುವರಿಯಾಗಿ 1 ಲಕ್ಷ ರೂಪಾಯಿ ಸಾಲ ಹೊರೆಸುತ್ತಿದ್ದಾರೆ. ಇದಕ್ಕಿಂತ ದೊಡ್ಡ ಶ್ವೇತ ಪತ್ರ ಬೇಕಾ ಎಂದು ಪ್ರಶ್ನಿಸಿದರು.

ವಸತಿ ಹಗರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶಾಸಕ ಬಿ‌.ಆರ್ ಪಾಟೀಲ್ ಮೊದಲು ಮಾತಾಡಿದ್ದರು. ಈಗ ಬಿ.ಆರ್ ಪಾಟೀಲ್ ಸುಮ್ಮನಾಗಿದ್ದಾರೆ. ಬಿ.ಆರ್ ಪಾಟೀಲ್ ಈಗೇನು ಹೇಳುತ್ತಾರೆ? ಈಗ ಯೋಜನಾ ಆಯೋಗದ ಉಪಾಧ್ಯಕ್ಷ ಇದ್ದಾರೆ. ಮುಂದೆ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಅವಕಾಶ ಕೊಡಬಹುದು ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್ ಅಶೋಕ್ ದೆಹಲಿಗೆ ತೆರಳಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರವರ ಕೆಲಸಕ್ಕೆ ದೆಹಲಿಗೆ ಹೋಗುತ್ತಾರೆ, ಬರುತ್ತಾರೆ. ಅದಕ್ಕೆಲ್ಲಾ ನಾವು ಪ್ರತಿಕ್ರಿಯಿಸಲು ಆಗುತ್ತಾ ಎಂದರು.

ಕೃಷಿ ಇಲಾಖೆ ನಿರ್ಲಕ್ಷ್ಯ

ರೈತರಿಗೆ ಸರಿಯಾಗಿ ಬೀಜ ಗೊಬ್ಬರ ಸಿಗದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಮೊನ್ನೆ ಸೋಯಾಬಿನ್ ವಿಚಾರ ಹೇಳಿದ್ದೆ ರಾಣೆಬೆನ್ನೂರಿನಲ್ಲಿ ಕಳಪೆ ಬೀಜ ಮಾರಾಟ ಮಾಡಲಾಗಿದೆ ಎಂದು ಕೇಸ್ ಮಾಡಿದ್ದಾರೆ‌. ಮಳೆ ಆಗುತ್ತಿದೆ. ಗೊಬ್ಬರ ಸಿಗುತ್ತಿಲ್ಲ. ಮಳೆ ಹೆಚ್ಚಾಗುತ್ತಿರುವುದರಿಂದ ಯೂರಿಯಾ ಗೊಬ್ಬರ ಬೇಕು ಆದರೆ ಯೂರಿಯಾ ಕೊರತೆ ಆಗುತ್ತಿದೆ. ಬಂದಿದ್ದೆಲ್ಲಾ ಹೋಲ್ ಸೇಲ್ ನಲ್ಲಿ ದುಡ್ಡಿಗೆ ಮಾರಾಟ ಮಾಡಿಕೊಂಡಿದ್ದಾರೆ. ಕೃಷಿ ಇಲಾಖೆ ಮೇಲೆ ನಾನು ನೇರವಾಗಿ ಆರೋಪ ಮಾಡುತ್ತಿದ್ದೇನೆ. ದುಡ್ಡು ತೆಗೆದುಕೊಂಡು ಮಾರಾಟ ಮಾಡಿಕೊಂಡಿದ್ದಾರೆ. ಯೂರಿಯಾ ಗೊಬ್ಬರ ಅತ್ಯಂತ ಅವಶ್ಯಕತೆ ಇದೆ. ಆದರೆ ಸಿಗುತ್ತಿಲ್ಲ. ಸೊಸೈಟಿಗಳಿಗೂ ಕೊಡುತ್ತಿಲ್ಲ, ಲೋಕಲ್ ಡೀಲರ್ಸ್ ಗೂ ಕೊಡುತ್ತಿಲ್ಲ. ಮನ್ಸೂನ್ ನಲ್ಲಿ ರೈತರಿಗೆ ಏನು ಸಿಗಬೇಕೋ ಅದು ಸಿಗುತ್ತಿಲ್ಲ. ಜಿಲ್ಲೆಗೆ ಯಾರು ಬರುತ್ತಾರೆ ಹೋಗುತ್ತಾರೆ ಮುಖ್ಯವಲ್ಲ. ಕಾಲಕಾಲಕ್ಕೆ ರೈತರಿಗೆ ಏನು ಸಿಗಬೇಕೊ ಅದು ಸಿಗುತ್ತಿಲ್ಲ. ಕೃಷಿ ಇಲಾಖೆ ಹಾವೇರಿ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande