ನವದೆಹಲಿ, 27 ಜೂನ್ (ಹಿ.ಸ.) :
ಆ್ಯಂಕರ್ : ಭಾರತವು 2029ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟ ಆಯೋಜನೆಗೆ ಆಯ್ಕೆಯಾಗಿರುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸಮಾಜಿಕ ಜಾಲತಾಣ ಎಕ್ಸನಲ್ಲಿ ಪ್ರಕಟಣೆ ನೀಡಿದ ಅವರು, ಈ ಮಹತ್ವದ ಕ್ರೀಡಾಕೂಟದ ಆತಿಥ್ಯ ಭಾರತಕ್ಕೆ ದೊರೆತಿರುವುದು ದೇಶದ ಬೆಳೆದಿರುವ ಕ್ರೀಡಾ ಮೂಲಸೌಕರ್ಯಗಳಿಗೆ ಜಾಗತಿಕ ಮಾನ್ಯತೆ ನೀಡಿದಂತಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನದ ಫಲ ಎಂದು ಹೇಳಿದರು.
2029ರಲ್ಲಿ ನಡೆಯಲಿರುವ ಈ ಕ್ರೀಡಾಕೂಟವು ಗುಜರಾತ್ನ ಅಹಮದಾಬಾದ್, ಗಾಂಧಿನಗರ ಮತ್ತು ಏಕ್ತಾ ನಗರಗಳಲ್ಲಿ ನಡೆಯಲಿದೆ. 50ಕ್ಕೂ ಹೆಚ್ಚು ಕ್ರೀಡಾ ವಿಭಾಗಗಳಲ್ಲಿ ವಿಶ್ವದ ವಿವಿಧ ದೇಶಗಳ ಪೊಲೀಸ್, ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಸಿಬ್ಬಂದಿ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಹಮದಾಬಾದ್ ನಗರವನ್ನು ಆತಿಥ್ಯ ಸ್ಥಳವಾಗಿ ಆಯ್ಕೆ ಮಾಡಿರುವುದು, ಅದನ್ನು ಕ್ರೀಡಾ ತಾಣವಾಗಿ ಬೆಳೆಸುವ ದಿಟ್ಟ ಹೆಜ್ಜೆಯಾಗಿದೆ ಎಂದು ಶಾ ವಿವರಿಸಿದ್ದು. ಈ ಮೈಲುಗಲ್ಲು ಭಾರತಕ್ಕೆ ಕ್ರೀಡೆ ಮತ್ತು ಸಾರ್ವಜನಿಕ ಸುರಕ್ಷಾ ಕ್ಷೇತ್ರಗಳಲ್ಲಿ ಮತ್ತಷ್ಟು ಪ್ರಾಧಾನ್ಯತೆ ತರಲಿದೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa