ತರಬೇತಿ ಭತ್ಯೆ ಸೌಲಭ್ಯಕ್ಕಾಗಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಧಾರವಾಡ, 27 ಜೂನ್ (ಹಿ.ಸ.): ಆ್ಯಂಕರ್:2025-26 ನೇ ಸಾಲಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಧಾರವಾಡ ಜಿಲ್ಲೆಗೆ ಸೇರಿದ ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ, ಮತ್ತು ಪ್ರವರ್ಗ-3ಬಿ ವರ್ಗಕ್ಕೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ
ತರಬೇತಿ ಭತ್ಯೆ ಸೌಲಭ್ಯಕ್ಕಾಗಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ


ಧಾರವಾಡ, 27 ಜೂನ್ (ಹಿ.ಸ.):

ಆ್ಯಂಕರ್:2025-26 ನೇ ಸಾಲಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಧಾರವಾಡ ಜಿಲ್ಲೆಗೆ ಸೇರಿದ ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ, ಮತ್ತು ಪ್ರವರ್ಗ-3ಬಿ ವರ್ಗಕ್ಕೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ತರಬೇತಿ ಭತ್ಯೆ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಎರಡನೇ ತಂಡದ ಅಭ್ಯರ್ಥಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಪ್ರರ್ಗ-1 ರ ಅಭ್ಯರ್ಥಿಯ ಕುಟುಂಬದ ವಾರ್ಷಿಕ ರೂ. 3.50 ಲಕ್ಷ ಆದಾಯ ಮಿತಿ ಹೊಂದಿದ್ದು 40 ವರ್ಷದೊಳಗಿನವರಾಗಿರಬೇಕು. ಪ್ರವರ್ಗ-2ಎ, ಪ್ರವರ್ಗ-3ಎ, ಮತ್ತು ಪ್ರವರ್ಗ-3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಆದಾಯ 2.50 ಲಕ್ಷ ಆದಾಯ ಮಿತಿ ಹೊಂದಿದ್ದು 38 ವರ್ಷದೂಳಗಿನವರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.4,000 ಭತ್ಯೆಯನ್ನು 4 ವರ್ಷಗಳವರೆಗೆ ನೀಡಲಾಗುವುದು.

ಕಾನೂನು ಪದವೀಧರರಿಗೆ ವಕೀಲ ವೃತ್ತಿಯಲ್ಲಿ ನ್ಯಾಯಾಂಗ ಸೇವೆಯ ಪೂರ್ವ ತರಬೇತಿ ಪಡೆಯಲು ಪದವಿ ಪಡೆದ 2 ವರ್ಷದೊಳಗಿನ ಅವಧಿಯ ಅರ್ಹ ಆಸಕ್ತಿಯುಳ್ಳ ಕಾನೂನು ಪದವೀಧರರು ಜುಲೈ 31, 2025 ರೊಳಗಾಗಿ ವೆಬ್‍ಸೈಟ್ www.bcwd.kar.nic.in ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0836-2447961 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande