ಮೈಸೂರು, 27 ಜೂನ್ (ಹಿ.ಸ.) :
ಆ್ಯಂಕರ್ : ಮೊದಲ ಆಷಾಢ ಶುಕ್ರವಾರದ ಅಂಗವಾಗಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಭಕ್ತಸಾಗರವೇ ಹರಿದು ಬಂದಿದೆ.
ದೇವಿಗೆ ಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ದೇವಾಲಯವನ್ನು ಹೂಗಳಿಂದ ಅಲಂಕರಿಸಲಾಗಿದೆ. ₹300, ₹2000 ಟಿಕೆಟ್ ಹಾಗೂ ಧರ್ಮದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ₹2000 ಟಿಕೆಟ್ಗೆ ಪ್ರಸಾದ ಕಿಟ್ ನೀಡಲಾಗುತ್ತಿದೆ.
ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಲಲಿತ್ ಮಹಲ್ ಹೆಲಿಪ್ಯಾಡ್ನಿಂದ ಬಸ್ ವ್ಯವಸ್ಥೆ ಮಾಡಲಾಗಿದ್ದು, ಮೆಟ್ಟಿಲು ಮಾರ್ಗಕ್ಕೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa