ಹಲವು ದೇಶಗಳ ಪ್ರತಿನಿಧಿಗಳ ಜೊತೆ ರಕ್ಷಣಾ ಸಚಿವರ ದ್ವಿಪಕ್ಷೀಯ ಸಭೆ
ನವದೆಹಲಿ, 27 ಜೂನ್ (ಹಿ.ಸ.) : ಆ್ಯಂಕರ್ : ಶಾಂಘೈ ಸಹಕಾರ ಸಂಘಟನೆಯ ರಕ್ಷಣಾ ಸಚಿವರ ಸಭೆಯಲ್ಲಿ ಭಾಗವಹಿಸಿದ್ದ ಭಾರತ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾ, ರಷ್ಯಾ, ತಜಿಕಿಸ್ತಾನ್, ಕಝಾಕಿಸ್ತಾನ್ ಮತ್ತು ಬೆಲಾರಸ್‌ಗಳ ರಕ್ಷಣಾ ಸಚಿವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿ, ಭಯೋತ್ಪಾದನೆ ವಿರೋಧಿ ಕ್ರಮಗಳ
Meeting


ನವದೆಹಲಿ, 27 ಜೂನ್ (ಹಿ.ಸ.) :

ಆ್ಯಂಕರ್ : ಶಾಂಘೈ ಸಹಕಾರ ಸಂಘಟನೆಯ ರಕ್ಷಣಾ ಸಚಿವರ ಸಭೆಯಲ್ಲಿ ಭಾಗವಹಿಸಿದ್ದ ಭಾರತ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾ, ರಷ್ಯಾ, ತಜಿಕಿಸ್ತಾನ್, ಕಝಾಕಿಸ್ತಾನ್ ಮತ್ತು ಬೆಲಾರಸ್‌ಗಳ ರಕ್ಷಣಾ ಸಚಿವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿ, ಭಯೋತ್ಪಾದನೆ ವಿರೋಧಿ ಕ್ರಮಗಳ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡರು.

ರಾಜನಾಥ್ ಸಿಂಗ್ ಅವರು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ನಡೆಸಿದ ಆಪರೇಷನ್ 'ಸಿಂದೂರ್' ಬಗ್ಗೆ ವಿವರಣೆ ನೀಡಿ, ಪಾಕಿಸ್ತಾನ ಆಧಾರಿತ ಭಯೋತ್ಪಾದಕ ಜಾಲಗಳನ್ನು ನಾಶಮಾಡುವುದು ಭಾರತದ ಗುರಿ ಎಂದು ಸ್ಪಷ್ಟಪಡಿಸಿದರು.

ಚೀನಾ ರಕ್ಷಣಾ ಸಚಿವ ಅಡ್ಮಿರಲ್ ಡಾಂಗ್ ಜುನ್ ಅವರೊಂದಿಗೆ ಸಭೆಯಲ್ಲಿ, ಗಡಿಯಲ್ಲಿ ಶಾಂತಿ-ನೆಮ್ಮದಿಯನ್ನು ಕಾಪಾಡುವ ಅಗತ್ಯ, ಗಡಿ ವಿವಾದಗಳನ್ನು ಶಾಂತಪೂರ್ಣವಾಗಿ ಪರಿಹರಿಸುವ ಸಂಬಂಧದಲ್ಲಿ ಚರ್ಚೆ ನಡೆದಿದ್ದು, ಕೈಲಾಸ-ಮಾನಸ ಸರೋವರ ಯಾತ್ರೆಯ ಪುನರಾರಂಭದ ಕುರಿತ ಮೆಚ್ಚುಗೆಯೂ ವ್ಯಕ್ತವಾಯಿತು.

ರಷ್ಯಾ ರಕ್ಷಣಾ ಸಚಿವ ಆಂಡ್ರೆ ಬೆಲೌಸೊವ್ ಅವರೊಂದಿಗೆ ನಡೆದ ಮಾತುಕತೆಯಲ್ಲಿ ಭಾರತ-ರಷ್ಯಾ ರಕ್ಷಣಾ ಸಹಕಾರ, ಗಡಿಯಾಚೆಗಿನ ಭಯೋತ್ಪಾದನೆ, S-400 ಪೂರೈಕೆ, SU-30 MKI ನವೀಕರಣ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳ ಖರೀದಿ ಕುರಿತಂತೆ ಪ್ರಮುಖ ಚರ್ಚೆಗಳು ನಡೆದವು. ರಷ್ಯಾ, ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಭಾರತಕ್ಕೆ ಬೆಂಬಲ‌ ನೀಡಿತು.

ಬೆಲಾರಸ್, ತಜಿಕಿಸ್ತಾನ್ ಮತ್ತು ಕಝಾಕಿಸ್ತಾನ್ ರಕ್ಷಣಾ ಸಚಿವರೊಂದಿಗೆ ಸಭೆಗಳಲ್ಲಿ ಮಿಲಿಟರಿ ತರಬೇತಿ, ತಾಂತ್ರಿಕ ಸಹಕಾರ, ಶಸ್ತ್ರಾಸ್ತ್ರ ಖರೀದಿ ಮತ್ತು ಪರಸ್ಪರ ಆಸಕ್ತಿಯ ಇತರ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿ ಕುರಿತು ಚರ್ಚೆ ನಡೆಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande