ದಾವಣಗೆರೆ, 27 ಜೂನ್ (ಹಿ.ಸ.):
ಆ್ಯಂಕರ್:ದಾವಣಗೆರೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಕುವೆಂಪು ಕನ್ನಡ ಭವನದಲ್ಲಿ ನಡೆದ 516ನೇ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಅವರು ಮಾತನಾಡಿ, ವೈಜ್ಞಾನಿಕ ತಳಹದಿಯ ಮೇಲೆ ವಿದ್ಯಾರ್ಥಿಗಳು ಚಿಂತನೆ ಮಾಡಬೇಕು ಎಂದು ಸಲಹೆ ನೀಡಿದರು.
ಕೆಂಪೇಗೌಡರ ಯೋಜಿತ ನಗರ ನಿರ್ಮಾಣ ಹಾಗೂ ಅವರ ದೂರದೃಷ್ಟಿಯನ್ನು ಮೆಚ್ಚಿ, ಅವರ ಹಾದಿಯಲ್ಲಿ ಯುವಕರು ಸಾಗಬೇಕೆಂದು ಕರೆ ನೀಡಿದರು. ಬೆಂಗಳೂರಿನ ಅಭಿವೃದ್ಧಿಗೆ ಕೆಂಪೇಗೌಡರು ನೀಡಿದ ಕೊಡುಗೆ ಅಪಾರವಾಗಿದ್ದು, ಬಳಕೆದಾರನ ಚಿಂತನಶೀಲತೆಯ ಬೆಳವಣಿಗೆಗೆ ಪ್ರೇರಣೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಡಿಡಿಪಿಐ ಕೊಟ್ರೇಶ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್, ಬಿಇಒ ಪುಪ್ಪಾಲತಾ, ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಾಮದೇವಪ್ಪ, ಒಕ್ಕಲಿಗರ ಸಂಘದ ಅಧ್ಯಕ್ಷ ಯೋಗೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa