ನವದೆಹಲಿ, 27 ಜೂನ್ (ಹಿ.ಸ.) :
ಆ್ಯಂಕರ್ : ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಶುಕ್ರವಾರ ಇರಾನಿನ ಉಪ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.
ಈ ವೇಳೆ ಇತ್ತೀಚಿನ ಸಂಘರ್ಷದ ಸಂದರ್ಭದಲ್ಲಿ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಇರಾನ್ ನೀಡಿದ ಸಹಕಾರಕ್ಕೆ ಅವರು ಧನ್ಯವಾದಗಳು ತಿಳಿಸಿದರು.
ಈ ಬಗ್ಗೆ ಜೈಶಂಕರ್ ಅವರು ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಸ್ತುತ ಸಂಕೀರ್ಣ ಪರಿಸ್ಥಿತಿಯಲ್ಲಿ ಇರಾನ್ನ ನಿಲುವು ಹಾಗೂ ಚಿಂತನೆಗಳನ್ನು ತಿಳಿದುಕೊಳ್ಳಲಾಯಿತು, ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa