ನವದೆಹಲಿ, 27 ಜೂನ್ (ಹಿ.ಸ.) :
ಆ್ಯಂಕರ್ : ಪಶ್ಚಿಮ ಬಂಗಾಳದ ಕೋಲ್ಕತ್ತಾ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಕಿರುಕುಳ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂಪ್ರೇರಿತವಾಗಿ ಪರಿಗಣಿಸಿದ್ದು, ತೀವ್ರ ಕಳವಳ ವ್ಯಕ್ತಪಡಿಸಿದೆ.
ಆಯೋಗದ ಅಧ್ಯಕ್ಷೆ ವಿಜಯಾ ರಹತ್ಕರ್ ಅವರು ಕೋಲ್ಕತ್ತಾ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು, ಮೂರು ದಿನಗಳಲ್ಲಿ ವಿವರವಾದ ವರದಿ ಸಲ್ಲಿಸಲು ಸೂಚಿಸಿದ್ದಾರೆ.
ಬಿಎನ್ಎಸ್ಎಸ್ ಸೆಕ್ಷನ್ 396 ಅಡಿಯಲ್ಲಿ ಸಂತ್ರಸ್ತೆಗೆ ತಕ್ಷಣದ ವೈದ್ಯಕೀಯ, ಮಾನಸಿಕ ಹಾಗೂ ಕಾನೂನು ನೆರವು ಒದಗಿಸಬೇಕೆಂದು ನಿರ್ದೇಶನ ನೀಡಿದ್ದಾರೆ.
ಈ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ, ಈ ಅಘಾತಕಾರಿ ಘಟನೆ ಪೂರ್ವನಿಯೋಜಿತವಾಗಿದ್ದು, ಆರೋಪಿಗಳು ನಿಗದಿತವಾಗಿ ಕಾರ್ಯಾಚರಿಸಿದ್ದರೆಂಬ ಅಂಶ ಬೆಳಕಿಗೆ ಬಂದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa