ಬೆಂಗಳೂರು, 27 ಜೂನ್ (ಹಿ.ಸ.) :
ಆ್ಯಂಕರ್ : ಸೆಪ್ಟೆಂಬರ್ನಲ್ಲಿ ಕ್ರಾಂತಿ ನಡೆಯುವ ಬಗ್ಗೆ ಕೆ.ಎನ್.ರಾಜಣ್ಣಗೆ ಮಾಹಿತಿ ಇರಬೇಕು. ಇಲ್ಲದಿದ್ದರೆ ಹಾಗೆ ಹೇಳುತ್ತಿರಲಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೆಪ್ಟಂಬರ್ ನಂತರ ಭಾರಿ ಬದಲಾವಣೆ ಆಗಲಿದೆ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಜಣ್ಣ ಅವರಿಗೆ ಯಾವ ಮಾಹಿತಿ ಇದೆ ಗೊತ್ತಿಲ್ಲ. ಸೆಪ್ಟೆಂಬರ್ನಲ್ಲಿ ಕ್ರಾಂತಿಯಾಗುತ್ತೆ ಎಂದು ಹೇಳಿದ್ದಾರೆ. ಅವರಿಗೆ ಯಾವುದೋ ಮಾಹಿತಿ ಇರಬೇಕು. ಇಲ್ಲದಿದ್ದರೆ ಆ ರೀತಿ ಅವರು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹೇಳುತ್ತಿರಲಿಲ್ಲ. ಯಾವ ಕ್ರಾಂತಿ ಅನ್ನೋದನ್ನು ಅವರನ್ನೇ ಕೇಳಿ. ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.
ಮಂತ್ರಿಗಳ ಬದಲಾವಣೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಅವರಿಗಿರುವ ಮಾಹಿತಿ ಪ್ರಕಾರ ಹೇಳಿರಬಹುದು. ನನಗೆ ಯಾವುದೇ ಮಾಹಿತಿ ಇಲ್ಲ. ನನಗೆ ತಿಳಿದಂತೆ ಯಾವುದೇ ಬದಲಾವಣೆ ಆಗುವುದಿಲ್ಲ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa