ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮ
ಗದಗ, 27 ಜೂನ್ (ಹಿ.ಸ.) ಆ್ಯಂಕರ್:- ಜಗದ್ಗುರು ಪಂಚಾಚಾರ್ಯ ವೇದ ಆಗಮನ ಸಂಸ್ಕೃತ ಪಾಠಶಾಲೆ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಸಹಯೋಗದಲ್ಲಿ ಕಾಶೀ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ
ಪೋಟೋ


ಗದಗ, 27 ಜೂನ್ (ಹಿ.ಸ.)

ಆ್ಯಂಕರ್:- ಜಗದ್ಗುರು ಪಂಚಾಚಾರ್ಯ ವೇದ ಆಗಮನ ಸಂಸ್ಕೃತ ಪಾಠಶಾಲೆ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಸಹಯೋಗದಲ್ಲಿ ಕಾಶೀ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ವಿವೇಕಾನಂದ ನಗರದ ಗಾಣಿಗ ಭವನದಲ್ಲಿ ಜೂನ್ 28ರಿಂದ ಜುಲೈ 7ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಸಮಿತಿ ಕಾರ್ಯಾಧ್ಯಕ್ಷ ವಿ.ಕೆ. ಗುರುಮಠ ಹೇಳಿದರು.

ಸೇವಾ ಸಂಘ, ಜಗದ್ಗುರು ಗದಹ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ

ಮಾತನಾಡಿದ ಅವರು, ಪ್ರತಿನಿತ್ಯ ಬೆಳಿಗ್ಗೆ 7ರಿಂದ 11.30ರವರೆಗೆ ಕಾಶಿ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರ ಸಂಗೀತಯುಕ್ತ ಇಷ್ಟಲಿಂಗ ಪೂಜೆ ಹಾಗೂ ಸಂಜೆ 7ರಿಂದ 9ರವರೆಗೆ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ನೆರವೇರಲಿದೆ ಎಂದು ತಿಳಿಸಿದರು.

ಜೂ. 28ರಂದು ಸಂಜೆ 7ಕ್ಕೆ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಆಶೀರ್ವಚನ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭನೆರವೇರಲಿದ್ದು, ಕಾಶೀ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಸಾನ್ನಿಧ್ಯ ವಹಿಸುವರು. ಕಾನೂನು. ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸುವರು. ಜೂ. 29ರಂದು ಸಂಜೆ 7ಕ್ಕೆ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಆಶೀರ್ವಚನ

ಕಾರ್ಯಕ್ರಮದ ಧರ್ಮಸಭೆ' ಜರುಗಲಿದ್ದು, ಪಂಡರಪುರದ ಸುಭಾಸ ಸಿದ್ದರಾಮ ಮಮಾನೆ ಅವರಿಗೆ ಶ್ರೀ ಜಗದ್ಗುರು ಪಂಚಾಚಾರ್ಯ ಕೃಪಾಪೋಷಿತ ಧರ್ಮಪ್ರಕಾಶ ಪ್ರಶಸ್ತಿ ಹಾಗೂ ಉಡನಕಲ್‌ನ ಸರಕಾರಿ ಪ್ರೌಢಶಾಲೆಯ ಸಂಗೀತ ಶಿಕ್ಷಕ ವೀರಭದ್ರಪ್ಪ ಹಿರೆಬೆನಕಲ್ ಅವರಿಗೆ ದಿವ್ಯಾಂಗ ಪ್ರತಿಭಾ ಪುರಸ್ಕಾರ, ನಗದು ಸೇರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಜೂ. 28ರಿಂದ ಜು.7ರವರೆಗೆ ಎಂದಿನಂತೆ ಪ್ರತಿನಿತ್ಯ ಸಂಜೆ 7ಕ್ಕೆ ನರೇಗಲ್ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅವರು ಶ್ರೀ ಸಿದ್ಧಾಂತ ಶಿಖಾಮಣಿ ಕುರಿತು ಪ್ರಾಸ್ತಾವಿಕವಾಗಿ ಮಾತನಾಡುವರು.

ಜಗದ್ಗುರು ಪಂಚಾಚಾರ್ಯ ವೇದ ಆಗಮ ಸಂಸ್ಕೃತ ಪಾಠಶಾಲಾ ವಟುಗಳಿಂದ ವೇದಘೋಷ ಜರುಗಲಿದೆ. ಮಹಾಪೂಜೆಯಲ್ಲಿ ಪಾಲ್ಗೊಂಡ ದಂಪತಿಗಳಿಗೆ ಹಾಗೂ ಪ್ರಸಾದ ಸೇವೆಗೈದ ಭಕ್ತರಿಗೆ ಗುರುರಕ್ಷೆ ಹಾಗೂ ಮಹಾಪ್ರಸಾದ ನೆರವೇರಲಿದೆ ಎಂದು ವಿವರಿಸಿದರು.

ಜು. 7ರಂದು ಸಂಜೆ 7ಕ್ಕೆ ಕಾರ್ಯಕ್ರಮಗಳ ಮಹಾಮಂಗಲೋತ್ಸವ ನೆರವೇರಲಿದ್ದು, ಕಾಶೀ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಸಾನ್ನಿಧ್ಯ ವಹಿಸುವರು. ಮುಕ್ತಿಮಂದಿರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸುವರು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಗೌರವಾಧ್ಯಕ್ಷ ಮಂಜುನಾಥ ಬೇಳೇರಿ, ಪ್ರಧಾನ ಕಾರ್ಯದರ್ಶಿ ಸುರೇಶ ಅಬ್ಬಿಗೇರಿ, ಸಿದ್ದಲಿಂಗಪ್ಪ ಚಳಗೇರಿ, ವೀರಭದ್ರಯ್ಯ ಧನ್ನೂರಹಿರೇಮಠ, ಸಂತೋಷ ಅಬ್ಬಿಗೇರಿ, ಉಮಾಪತಿ ಭೂಸನೂರಮಠ, ಮಹೇಶ ಬೆಲೇರಿ, ಎಂ.ಎಂ. ಹಿರೇಮಠ ಹಾಗೂ ಸಿ.ಜಿ. ಹಿರೇಗೌಡ್ರ ಇದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande