ಹುಲಿ ಸಾವು ಪ್ರಕರಣ, ರಾಜ್ಯ ಸರ್ಕಾರದ ವಿರುದ್ಧ ಬಸವರಾಜ್ ಬೊಮ್ಮಾಯಿ ಆಕ್ರೋಶ
ಗದಗ, 27 ಜೂನ್ (ಹಿ.ಸ.) : ಆ್ಯಂಕರ್ : ಹುಲಿ ರಕ್ಷಿತ ಪ್ರದೇಶದಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿಗಳ ಸಾವು ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ. ಗದಗ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದರು, ಈ ದುರಂತಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ
ಪೋಟೋ


ಗದಗ, 27 ಜೂನ್ (ಹಿ.ಸ.) :

ಆ್ಯಂಕರ್ : ಹುಲಿ ರಕ್ಷಿತ ಪ್ರದೇಶದಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿಗಳ ಸಾವು ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ.

ಗದಗ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದರು, ಈ ದುರಂತಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಅವರು ಗದಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅರಣ್ಯ ಇಲಾಖೆ ವಿರುದ್ಧ ಕಿಡಿಕಾರಿ:

ಹುಲಿಗಳು ನಮ್ಮ ದೇಶದ ಅತ್ಯಮೂಲ್ಯ ವನ್ಯ ಸಂಪತ್ತು. ಈ ರೀತಿ ಪ್ರಾಣಿಗಳ ಆಕಸ್ಮಿಕ ಸಾವು ಸರಳ ವಿಚಾರವಲ್ಲ. ಇಂಥ ಸಂದರ್ಭಗಳಲ್ಲಿ ಅರಣ್ಯ ಇಲಾಖೆಯ ನಿರ್ಲಕ್ಷ್ಯ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಜನಸಂಚಾರಕ್ಕೆ ತಡೆಯಿಲ್ಲದೇ ಬಿಡಲಾಗಿದೆ, ರೆಸಾರ್ಟ್‌ಗಳಿಗೆ ಅನುಮತಿ, ಪಿಕ್ನಿಕ್‌ಗೆ ಅವಕಾಶ ಇವುಗಳ ಪರಿಣಾಮವೇ ಈ ದುರಂತ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕುಳಿತ ಅಧಿಕಾರಿಗಳ ಬಗ್ಗೆ ಆರೋಪ: ಅರಣ್ಯ ರಕ್ಷಣೆಗಿಕಾರಲ್ಲಿ ಆಸಕ್ತಿ ಹೆಚ್ಚಿದಂತೆ ಇದೆ. ಬೆಂಗಳೂರಿನಲ್ಲಿ ಅಧಿಕಾರಿಗಳು ಕುಳಿತಿದ್ದಾರೆ. ನಾವು ಅಧಿಕಾರದಲ್ಲಿದ್ದಾಗ ಫಾರೆಸ್ಟ್ ಅಧಿಕಾರಿ, ಗಾರ್ಡ್‌ಗಳನ್ನು ಕಾಡಿಗೆ ಪೋಸ್ಟ್ ಮಾಡಿದ್ದೆವು. ಆದರೆ ಈಗ ಅವರಿಗೆ ಮತ್ತೆ ನಗರ ದೆಸೆ ಹಿಡಿಯಲು ಅವಕಾಶ ಮಾಡಿಕೊಡಲಾಗಿದೆ ಎಂದು ಅವರು ಆರೋಪಿಸಿದರು.

ಕಳ್ಳಸಾಗಾಣಿಕೆ, ಅರಣ್ಯ ನಾಶದ ಆತಂಕ:

ಬೊಮ್ಮಾಯಿ ಹೇಳಿಕೆಯಲ್ಲಿ ಅರಣ್ಯದ ಅನಿಯಂತ್ರಿತ ನಾಶ, ಮರಗಳ ಕಟಾವು, ಕಳ್ಳ ಸಾಗಾಣಿಕೆ ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಪ್ರಾಣಿ–ಮಾನವ ಸಂಘರ್ಷದ ಪ್ರಮಾಣವೂ ದಿನೇದಿನೆ ಹೆಚ್ಚಾಗುತ್ತಿದೆ ಎಂದಿದ್ದಾರೆ.

ರಾತ್ರಿ ಸಂಚಾರ ಅನುಮತಿಯ ಬಗ್ಗೆ ಗಂಭೀರ ಆರೋಪ:

“ಕಾಂಗ್ರೆಸ್ ನಾಯಕತ್ವದ ಹಿನ್ನಲೆಯಲ್ಲಿ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಪ್ರಯತ್ನ ನಡೆಯುತ್ತಿದೆ. ಇದು ಸಂಪೂರ್ಣ ಖಾಸಗೀಕರಣದ ಹೆಜ್ಜೆ” ಎಂದು ಬೊಮ್ಮಾಯಿ ಆರೋಪಿಸಿದ್ದಾರೆ.

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹಾಗೂ ರಾಷ್ಟ್ರೀಯ ಅಧ್ಯಕ್ಷ ಸ್ಥಾನಗಳಿಗೆ ಬದಲಾವಣೆ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದ್ದು, ಈ ಕುರಿತು ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಗದಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯಾಧ್ಯಕ್ಷ ಬದಲಾಗ್ತಾರಾ ಅಥವಾ ಮುಂದುವರಿಯುತ್ತಾರಾ ಎಂಬುದರ ಬಗ್ಗೆ ಊಹಾಪೋಹ ಮಾಡುವ ಅಗತ್ಯವಿಲ್ಲ. ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ. ತೀರ್ಮಾನವಾದ ಬಳಿಕ ಎಲ್ಲರಿಗೂ ತಿಳಿಯುತ್ತದೆ” ಎಂದು ತಿಳಿಸಿದ್ದಾರೆ.

ಈ ಮೂಲಕ ಬಿಜೆಪಿ ನಾಯಕರ ಪಲ್ಲಟದ ಬಗ್ಗೆ ಗಂಭೀರ ಚರ್ಚೆ ಆರಂಭವಾಗಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

“ನನ್ನ ಮೇಲೆ ನೇರ ಭ್ರಷ್ಟಾಚಾರದ ಆರೋಪವಿಲ್ಲ” ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಗೆ ಸಂಸದ ಬಸವರಾಜ್ ಬೊಮ್ಮಾಯಿ ಗದಗದಲ್ಲಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ಬಿಆರ್ ಪಾಟೀಲರು ಭ್ರಷ್ಟಾಚಾರದ ಬಗ್ಗೆ ಹೇಳಿ 15 ದಿನ ಕಳೆದರೂ ಯಾವುದೇ ಕ್ರಮಕೈಗೊಳ್ಳಲಾಗಿಲ್ಲ ಎಂದ ಅವರು, “ಇದು ಕೇವಲ ಒಂದು ಕ್ಷೇತ್ರದ ಸಮಸ್ಯೆಯಲ್ಲ. 224 ಕ್ಷೇತ್ರಗಳಲ್ಲೂ ಅವ್ಯವಹಾರ ನಡೆಯುತ್ತಿದೆ. ಗೃಹ ಹಂಚಿಕೆಯಲ್ಲಿಯೂ ಅಕ್ರಮ ನಡೆದಿದೆ. ಇಲ್ಲಿಯೂ ಉನ್ನತ ಮಟ್ಟದ ವ್ಯಕ್ತಿಗಳ ಪಾಲಿದೆ ಅನ್ನೋ ಸಂದೇಶ ಹೊರ ಬರುತ್ತಿದೆ” ಎಂದರುಮ

“ನನಗೆ ಸಂಬಂಧವಿಲ್ಲ ಅಂದ್ರೆ, ಯಾರು ಹೊಣೆ? ಎಲ್ಲಿ ಭ್ರಷ್ಟಾಚಾರ ನಡೆದಿದೆ ಅಂತಾ ಸರಿಯಾದ ತನಿಖೆ ನಡೆಸಿ, ತಪ್ಪಿತಸ್ಥರನ್ನು ಜೈಲಿಗೆ ತಳ್ಳಿದರೆ ಮಾತ್ರ ಅವರ ಮಾತಿಗೆ ನಂಬಿಕೆ ಬರಬಹುದು” ಎಂದ ಬೊಮ್ಮಾಯಿ, ಈ ಸರ್ಕಾರದ ನಿರ್ಲಕ್ಷ್ಯಕ್ಕೆ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು.

ಮತ್ತೊಂದೆಡೆ ಮುಖ್ಯಮಂತ್ರಿ ಕರೆದು ಮಾತಾಡ್ತಾರೆ ಎಂಬ ಜಮೀರ್ ಹೇಳಿಕೆಯನ್ನು ಉಲ್ಲೇಖಿಸಿ, “ಕರೆದು ಮಾತನಾಡಿದರೆ ಅಕ್ರಮಗಳು ನಿಲ್ಲುತ್ತವೆಯಾ? ನಿಯಂತ್ರಣಕ್ಕೆ ಮಂತ್ರಿಗಳ ಮಾತು ಸಾಕಾಗುತ್ತದೆಯಾ? ಈ ಸರ್ಕಾರ ಅತ್ಯಂತ ಅಸಹಾಯಕ, ದೌರ್ಬಲ್ಯದಿಂದ ಕೂಡಿದೆ ಎಂಬುದು ಸ್ಪಷ್ಟವಾಗಿದೆ” ಎಂದು ಹರಿಹಾಯ್ದರು.

ಈ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೊಮ್ಮಾಯಿ ನೇರ ಆರೋಪ ಮಾಡಿ ಭ್ರಷ್ಟಾಚಾರ ವಿಚಾರದಲ್ಲಿ ಗಂಭೀರ ತನಿಖೆಗೆ ಒತ್ತಾಯ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande