ಮೈಸೂರು, 28 ಜೂನ್ (ಹಿ.ಸ.):
ಆ್ಯಂಕರ್:ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಣೆ ಖಚಿತ, ಹೊಸ ಮುಖ್ಯಮಂತ್ರಿ ದಸರಾವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಪ್ರತಿಪಕ್ಷ ಇಆರ್.ಅಶೋಕ ಭವಿಷ್ಯ ನುಡಿದಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು,
ಮುಖ್ಯಮಂತ್ರಿ ಕುರ್ಚಿ ಬದಲಾವಣೆ ಬಗ್ಗೆ ಅಗ್ರಿಮೆಂಟ್ ಆಗಿರುವುದು ಖಚಿತ. ಇದರ ನಡುವೆ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಸರ್ಕಸ್ ಮಾಡುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಸೆಪ್ಟಂಬರ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ. ಈ ಬಗ್ಗೆ ಕಾಂಗ್ರೆಸ್ನಲ್ಲಿ ಅಗ್ರಿಮೆಂಟ್ ಆಗಿರುವುದು ಅಷ್ಟೇ ಖಚಿತ. ಈ ನಡುವೆ ಕುರ್ಚಿ ಉಳಿಸಿಕೊಳ್ಳಲು ಬೇರೆ ಬೇರೆ ರೀತಿ ಟ್ರಯಲ್ ನಡೆಯುತ್ತಿದೆ. ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ. ಈ ಬಾರಿ ದಸರಾ ಹೊಸ ಮುಖ್ಯಮಂತ್ರಿಯಿಂದ ಉದ್ಘಾಟನೆ ಆಗಲಿದೆ ಎಂದು ಭವಿಷ್ಯ ನುಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa