ಕಾಂಗ್ರೆಸ್ ಪಕ್ಷದಿಂದ ಒಬಿಸಿ ಸಮುದಾಯಕ್ಕೆ ಮೋಸ:ಭೂಪೇಂದ್ರ ಯಾದವ
ಬೆಂಗಳೂರು, 28 ಜೂನ್ (ಹಿ.ಸ.): ಆ್ಯಂಕರ್:ದೇಶದಲ್ಲಿ ಕಾಂಗ್ರೆಸ್ ಪಕ್ಷವು ಒಬಿಸಿ ಸಮುದಾಯಕ್ಕೆ ನಿರಂತರವಾಗಿ ಮೋಸ ಮಾಡುತ್ತ ಬಂದಿದೆ ಎಂದು ಕೇಂದ್ರ ಪರಿಸರ ವಿಜ್ಞಾನ, ಅರಣ್ಯ, ಹವಾಮಾನ ವೈಪರೀತ್ಯ ಖಾತೆ ಸಚಿವ ಭೂಪೇಂದ್ರ ಯಾದವ್ ಆರೋಪಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮಗೋ
ಕಾಂಗ್ರೆಸ್ ಪಕ್ಷದಿಂದ ಒಬಿಸಿ ಸಮುದಾಯಕ್ಕೆ ಮೋಸ:ಭೂಪೇಂದ್ರ ಯಾದವ


ಬೆಂಗಳೂರು, 28 ಜೂನ್ (ಹಿ.ಸ.):

ಆ್ಯಂಕರ್:ದೇಶದಲ್ಲಿ ಕಾಂಗ್ರೆಸ್ ಪಕ್ಷವು ಒಬಿಸಿ ಸಮುದಾಯಕ್ಕೆ ನಿರಂತರವಾಗಿ ಮೋಸ ಮಾಡುತ್ತ ಬಂದಿದೆ ಎಂದು ಕೇಂದ್ರ ಪರಿಸರ ವಿಜ್ಞಾನ, ಅರಣ್ಯ, ಹವಾಮಾನ ವೈಪರೀತ್ಯ ಖಾತೆ ಸಚಿವ ಭೂಪೇಂದ್ರ ಯಾದವ್ ಆರೋಪಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮಗೋಷ್ಟಿ ಉದ್ಧೇಶಿಸಿ ಮಾತನಾಡಿದ ಅವರು, ಸ್ವಾತಂತ್ರ್ಯದ ಬಳಿಕ ಒಬಿಸಿ ಸಮುದಾಯಕ್ಕೆ ಮೀಸಲಾತಿ ಲಭಿಸಬೇಕಿತ್ತು. ಆದರೆ, ಕಾಂಗ್ರೆಸ್ ಪಕ್ಷವು ಕಾಕಾ ಕಾಲೇಕರ್ ಆಯೋಗದ ವರದಿಯನ್ನು ಮೂಲೆಗೊತ್ತಿತಲ್ಲದೆ, ಅದನ್ನು ಅನುಷ್ಠಾನಕ್ಕೆ ತರಲಿಲ್ಲ ಎಂದು ದೂರಿದರು.

ದೇಶವು ತುರ್ತು ಪರಿಸ್ಥಿತಿಯಿಂದ ಸ್ವತಂತ್ರವಾದ ಬಳಿಕ, ಕಾಂಗ್ರೆಸ್ಸೇತರ, ಜನತಾ ಪಕ್ಷವು ಕೇಂದ್ರದಲ್ಲಿ ಅಧಿಕಾರ ಪಡೆಯಿತು. ಅಲ್ಲದೇ, ಮಂಡಲ್ ಆಯೋಗ ರಚಿಸಿತು. ಜನತಾ ಪಕ್ಷ ಅಧಿಕಾರಕ್ಕೆ ಬಾರದೆ ಇದ್ದರೆ ಮಂಡಲ್ ಆಯೋಗದ ರಚನೆ ಆಗುತ್ತಿರಲಿಲ್ಲ ಎಂದು ತಿಳಿಸಿದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡ ಬಳಿಕ ಬಿಜೆಪಿ ಬೆಂಬಲಿತ ವಿ.ಪಿ. ಸಿಂಗ್ ಅವರ ಸರ್ಕಾರವು ಮಂಡಲ್ ಆಯೋಗದ ವರದಿ ಜಾರಿಯಾಗಿ ಒಬಿಸಿಗೆ ಮೀಸಲಾತಿಯ ಪ್ರಯೋಜನ ಲಭಿಸಿತು ಎಂದು ತಿಳಿಸಿದರು. ವಿ. ಪಿ. ಸಿಂಗ್ ಅವರ ಸರ್ಕಾರವು ಅಧಿಕಾರ ಗಳಿಸದೆ ಇದ್ದರೆ ಮಂಡಲ್ ವರದಿಯೂ ಅನುಷ್ಠಾನಕ್ಕೆ ಬರುತ್ತಿರಲಿಲ್ಲ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande