ಕೋಲಾರ, ೨೮ ಜೂನ್ (ಹಿ.ಸ) :
ಆ್ಯಂಕರ್ : ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಗಣೇಶ ಟಿ.ಎನ್ ಮೊದಲ ರ್ಯಾಂಕ್ ಪಡೆದಿದ್ದಾರೆ.
ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಗ್ರಾಮದ ನಾಗರಾಜ್ ಆರ್ ಮತ್ತು ಹಂಸವೇಣಿ ದಂಪತಿಯ ಮಗನಾಗಿರುವ ಗಣೇಶ ಟಿ.ಎನ್ ರವರು ಶೇ.೮೨.೬೯ ಅಂಕ ಪಡೆದು ವಿಭಾಗಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಇವರ ಸಾಧನೆಗೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಚಿತ್ರ : ರ್ಯಾಂಕ್ ವಿದ್ಯಾರ್ಥಿ ಗಣೇಶ್
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್