ಭುವನೇಶ್ವರಿ ವಿಶೇಷ ಅಗತ್ಯವುಳ್ಳ ಮಕ್ಕಳ ಶಾಲೆಯಲ್ಲಿ ಅನ್ನದಾನ ಕಾರ್ಯಕ್ರಮ
ಗದಗ, 28 ಜೂನ್ (ಹಿ.ಸ.) ಆ್ಯಂಕರ್:- ದಿ|| ಪ್ರೇಮನಾಥ ಪವಾರವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಶ್ರೀಮತಿ ಸಂಗೀತಾ ಪವಾರವರು ವಿಶ್ವ ಕಲ್ಯಾಣ (ರಿ) ಗದಗ ಸಂಚಾಲಿತ ಭುವನೇಶ್ವರಿ ವಿಶೇಷ ಅಗತ್ಯವುಳ್ಳ ಮಕ್ಕಳ ಶಾಲೆಯಲ್ಲಿ ಸಿಹಿಯೊಂದಿಗೆ ಅನ್ನದಾನ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ಕಾರ್ಯಕ್ರಮದಲ್ಲ
ಪೋಟೋ


ಗದಗ, 28 ಜೂನ್ (ಹಿ.ಸ.)

ಆ್ಯಂಕರ್:- ದಿ|| ಪ್ರೇಮನಾಥ ಪವಾರವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಶ್ರೀಮತಿ ಸಂಗೀತಾ ಪವಾರವರು ವಿಶ್ವ ಕಲ್ಯಾಣ (ರಿ) ಗದಗ ಸಂಚಾಲಿತ ಭುವನೇಶ್ವರಿ ವಿಶೇಷ ಅಗತ್ಯವುಳ್ಳ ಮಕ್ಕಳ ಶಾಲೆಯಲ್ಲಿ ಸಿಹಿಯೊಂದಿಗೆ ಅನ್ನದಾನ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಸಂಗೀತಾ ಪವಾರವರು ಮಾತನಾಡಿ, ಸಮಾಜದಲ್ಲಿ ಅವಕಾಶವಂಚಿತ ವಿಶೇಷ ಮಕ್ಕಳಿಗೆ ಸೂಕ್ತವಾದ ಅವಕಾಶಗಳನ್ನು ಕಲ್ಪಿಸಿ, ಅವರವರ ಸಾಮಥ್ರ್ಯಗೆ ತಕ್ಕಂತೆ ತರಬೇತಿ ನೀಡಿ, ಸಮಾಜದ ಮುಖ್ಯವಾಹಿನಿಗೆ ತರುತ್ತಿರುವ ಸಂಸ್ಥೆಯ ಸೇವಾ ಕಾರ್ಯ ಶ್ಲಾಘನೀಯವಾಗಿದೆ. ಈ ಸೇವಾ ಕಾರ್ಯವನ್ನು ನಾವು ನಿವೆಲ್ಲಾ ಸೇರಿ ಮೇಲತ್ತುವುದರೊಂದಿಗೆ ಸಹಾಯ-ಸಹಕಾರ ಮಾಡೋಣವೆಂದು ಹೇಳುತ್ತಾ, ಇಂದು ದಿ|| ಪ್ರೇಮನಾಥ ಪವಾರವರ ಪುಣ್ಯ ಸ್ಮರಣೆಯನ್ನು ದೇವರ ಸ್ವರೂಪಿಗಳಾದ ಈ ವಿಶೇಷ ಮಕ್ಕಳಿಗೆ ಸಿಹಿಯೊಂದಿಗೆ ಊಟ ಹಾಕಿಸುವ ಸೌಭಾಗ್ಯ ನನಗೆ ದೊರೆತಿದೆ, ಇಂದು ನಮ್ಮ ಮನೆಯವರ ಆತ್ಮಕ್ಕೆ ಶಾಂತಿ ಸಿಕ್ಕಂತಾಗಿದೆಂದು ಭಾವುಕರಾಗಿ ಹೇಳಿದರು.

ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಶ್ರೀ ಮಂಜುನಾಥ ಪವಾರವರು ಮಾತನಾಡಿ. ಸಮಾಜ ನಮಗೆ ಏನು ಕೊಟ್ಟಿದೆ ಅನ್ನುವುದಕ್ಕಿಂತ, ನಾವು ಸಮಾಜಕ್ಕೆ ಏನು ಕೊಟ್ಟೀವಿ ಎಂಬುದು ಮುಖ್ಯ. ದೈವ ಸ್ವರೂಪಿಗಳಾದ ವಿಶೇಷ ಚೇತನ ಮಕ್ಕಳ ಪ್ರತಿಭೆಯನ್ನು ಸಮಾಜಕ್ಕೆ ತೋರಿಸುವುದರ ಮೂಲಕ ಮುಖ್ಯವಾಹಿನಿಗೆ ತರುವ ಸೇವೆಯನ್ನು ನಿಸ್ವಾರ್ಥವಾಗಿ ಮಾಡುತ್ತಿರುವ ವಿಶ್ವ ಕಲ್ಯಾಣ ಸಂಸ್ಥೆ ಸೇವಾ ಕಾರ್ಯ ಶ್ಲಾಘನೀವಾಗಿದೆ. ಪ್ರತ್ಯಕ್ಷ ದೇವರೇ ಈ ವಿಶೇಷ ಚೇತನ ಮಕ್ಕಳು ಹಾಗೂ ಇವರ ಸೇವೆ ಮಾಡುತ್ತಿರುವ ಸಿಬ್ಬಂದಿ ವರ್ಗದವರೂ ಕೂಡಾ ದೇವರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದಿ|| ಪ್ರೇಮನಾಥ ಪವಾರವರ ಭಾವಚಿತ್ರಕ್ಕೆ ಎಲ್ಲರೂ ಪುಷ್ಪಗಳನ್ನು ಸಮರ್ಪಿಸಿ, ದೀಪ ಬೆಳಗಿಸಿ ಪುಣ್ಯಸ್ಮರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ರಾಜ್ಯ ಪ್ರಶಸ್ತಿ ಪುರಸ್ಕøತರಾದ ಮಂಜುನಾಥ ಹದ್ದಣ್ಣವರವರ ವಹಿಸಿ ಪ್ರಾಸ್ತವಿಕವಾಗಿ ಮಾತನಾಡಿ, ಶ್ರೀಮತಿ ಸಂಗೀತಾ ಪವಾರವರು ನಮ್ಮ ಸೇವಾ ಕಾರ್ಯಕ್ಕೆ ಬೆನ್ನಲುಬಾಗಿ ನಿಂತಿದ್ದಾರೆ. ದಿ|| ಪ್ರೇಮನಾಥರವರ ಪುಣ್ಯ ಸ್ಮರಣೆಯನ್ನು ಶ್ರೀಮತಿ ಸಂಗೀತಾ ಪವಾರವರು ವಿಶೇಷ ಮಕ್ಕಳಿಗೆ ಸಿಹಿಯೊಂದಿಗೆ ಅನ್ನದಾನ ಮಾಡುವುದರೊಂದಿಗೆ ಈಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ. ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ಮಂಜುನಾಥ ಆಸಂಗಿ, ಶ್ರೀ ಶಂಕರಗೌಡ ಪಾಟೀಲ, ಶ್ರೀಮತಿ ಶಾಂತಮ್ಮಾ ಹೂಗಾರ, ವಿಶೇಷ ಮಕ್ಕಳು, ಸಿಬ್ಬಂದಿ ಹಾಗೂ ಪಾಲಕರು ಉಪಸ್ಥಿತರಿದ್ದರು, ಕೊನೆಗೆ ಎಲ್ಲರಿಗೂ ಸಿಹಿಯೊಂದಿಗೆ ಊಟವನ್ನು ಬಡಿಸಿದರು. ಆಗಮಿಸಿದೆಲ್ಲರೂ ವಿಶೇಷ ಮಕ್ಕಳಿಗೆ ಸಿಹಿಯೊಂದಿಗೆ ಊಟವನ್ನು ತಿನ್ನಿಸಿದ್ದು ತುಂಬಾ ವಿಶೇಷವಾಗಿತ್ತು.

---------------

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande