ಹಾವೇರಿ, 28 ಜೂನ್ (ಹಿ.ಸ.):
ಆ್ಯಂಕರ್:
ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಕೂನಬೇವು ಗ್ರಾಮದ ಹತ್ತಿರ ಗದಗ - ಹೊನ್ನಾಳಿ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಯ ಪರಿಶೀಲನೆಯನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ನಡೆಸಿದರು. ಈ ಸಂಧರ್ಭದಲ್ಲಿ ಇಲಾಖೆಯ ಅಧಿಕಾರಿಗಳಿಗೆ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವಶ್ಯಕವಿರುವ ಸೇತುವೆ ನಿರ್ಮಿಸಲು ನೀಲನಕ್ಷೆ ತಯಾರಿಸುವಂತೆ ಸೂಚಿಸಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕ ವೀರುಪಾಕ್ಷಪ್ಪ ಬಳ್ಳಾರಿ ಹಾಗೂ ರೈತರು ಇದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa