ರಾಜ್ಯದಲ್ಲಿ ಹೊಸ ಅಧ್ಯಕ್ಷರ ಘೋಷಣೆ ಇಲ್ಲ:ಅಶೋಕ
ಮೈಸೂರು, 28 ಜೂನ್ (ಹಿ.ಸ.): ಆ್ಯಂಕರ್:ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗಿಲ್ಲ. ಬೇರೆ ಬೇರೆ ರಾಜ್ಯಗಳ ಅಧ್ಯಕ್ಷರ ನೇಮಕದ ನಂತರ ಕೊನೆಯಲ್ಲಿ ನಮ್ಮ ರಾಜ್ಯಕ್ಕೆ ಹೊಸ ಅಧ್ಯಕ್ಷರ ಘೋಷಣೆಯಾಗುತ್ತದೆ. ಸದ್ಯಕ್ಕೆ ಘೋಷಣೆ ಮತ್ತು ಬದಲಾವಣೆಯ ಚರ್ಚೆ ನಡೆದಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ
ರಾಜ್ಯದಲ್ಲಿ ಹೊಸ ಅಧ್ಯಕ್ಷರ ಘೋಷಣೆ ಇಲ್ಲ:ಅಶೋಕ


ಮೈಸೂರು, 28 ಜೂನ್ (ಹಿ.ಸ.):

ಆ್ಯಂಕರ್:ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗಿಲ್ಲ. ಬೇರೆ ಬೇರೆ ರಾಜ್ಯಗಳ ಅಧ್ಯಕ್ಷರ ನೇಮಕದ ನಂತರ ಕೊನೆಯಲ್ಲಿ ನಮ್ಮ ರಾಜ್ಯಕ್ಕೆ ಹೊಸ ಅಧ್ಯಕ್ಷರ ಘೋಷಣೆಯಾಗುತ್ತದೆ. ಸದ್ಯಕ್ಕೆ ಘೋಷಣೆ ಮತ್ತು ಬದಲಾವಣೆಯ ಚರ್ಚೆ ನಡೆದಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯಲ್ಲಿರುವ ಗೊಂದಲಗಳನ್ನು ಸರಿ ಮಾಡುವ ಕೆಲಸ ನಡೆಯುತ್ತಿದ್ದು, ಈ ಬಗ್ಗೆ ಸಭೆಯನ್ನು ನಡೆಸಲಾಗುತ್ತಿದೆ. ಮುಂದೆ ಎಲ್ಲ ಸರಿಯಾಗಲಿದೆ. ಈ ನಡುವೆ ಅಮಿತ್‌ ಶಾ ಸೂಚನೆಯಂತೆ ವರದಿ ನೀಡಿದ್ದೇನೆ. ಮತ್ತೆ ವರದಿ ಕೇಳಿದ್ದಾರೆ ಎಂದಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande