ಹಾಸನ, 29 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸರ್ಕಾರದ ವತಿಯಿಂದ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ಮೈಸೂರು ಇಲ್ಲಿ ಅಂಧ ಮಕ್ಕಳಿಗೆ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ.
ಈ ವಿಶೇಷ ಡಿ.ಎಡ್, ಸಾಮಾನ್ಯ ಡಿ.ಎಡ್ ಗೆ ಸಮಾನಾಂತರವಾಗಿವೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ 50% (ಎಸ್.ಸಿ, ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45%) ಅಂಕಗಳೊಂದಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳು ಜು.12 ರ ಒಳಗೆ ವೆಬ್ಸೈಟ್ https://nber-rehabcouncil.gov.in/ ನಲ್ಲಿ ಅರ್ಜಿಸಲ್ಲಿಸಬಹುದು. ಈ ತರಬೇತಿ ಕಾರ್ಯಕ್ರಮಗಳು ರೆಗ್ಯೂಲರ್ ಆಗಿದ್ದು, ವಿಕಲಚೇತನರು ಸೇರಿದಂತೆ ಸಾಮಾನ್ಯ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ತರಬೇತಿಗಳು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ಬೋಧನ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು(ತರಬೇತಿ) ರವರ ಕಚೇರಿ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ಸರ್ಕಾರಿ ತರಬೇತಿ ಕೇಂದ್ರ ಪುಲಿಕೇಶಿ ರಸ್ತೆ, ತಿಲಕ್ನಗರ, ಮೈಸೂರು-570001. ದೂರವಾಣಿ ಸಂ:0821- 2491600 ತರಬೇತಿ ಸಂಯೋಜಕರು: ಆಶಾ.ವಿ.ಹಿರೇಮಠ್- 9113561620, ಟಿ.ಡಿ. ಮಂಜುನಾಥ - 9686762378 ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa