ಧಾರವಾಡ, 29 ಜೂನ್ (ಹಿ.ಸ.) :
ಆ್ಯಂಕರ್ : 2025-26 ನೇ ಮುದ್ರಾ ಯೋಜನೆಯಡಿ ಕೈಮಗ್ಗ ನೇಕಾರಿಕೆಯಲ್ಲಿ ತೊಡಗಿರುವ ಅಸಂಘಟಿತ ಕೈಮಗ್ಗ ನೇಕಾರರು ತಮ್ಮ ನೇಕಾರಿಕೆಯ ಉದ್ಯೋಗಕ್ಕಾಗಿ ರಾಷ್ಟ್ರೀಕೃತ, ವಾಣಿಜ್ಯ ಬ್ಯಾಂಕುಗಳಿಂದ ರಿಯಾಯಿತಿ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಸಂಘಟಿತ ಕೈಮಗ್ಗ ನೇಕಾರರು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅಥವಾ ಬ್ಯಾಂಕಗಳಿಂದ ಅರ್ಜಿ ನಮೂನೆ ಪಡೆದು, ಜುಲೈ 15, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836- 2448834 ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa