ಧಾರವಾಡ, 29 ಜೂನ್ (ಹಿ.ಸ.) :
ಆ್ಯಂಕರ್ : ಹಾವೇರಿ ಜಿಲ್ಲೆಯ ರಾಣೇಬೇನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಶ್ರೀ ಮಾಲತೇಶ ದೇವಸ್ಥಾನದ ಸಮಿತಿಗೆ ಮುಂದಿನ 5 ವರ್ಷಗಳ ಅವಧಿಯ ಸದಸ್ಯತ್ವದ ನೇಮಕಾತಿಗಾಗಿ ಅರ್ಹ ಅರ್ಜಿದಾರರಿಂದ ಅರ್ಜಿ ಅಹ್ವಾನಿಸಿದ್ದು, ಆಸಕ್ತಿಯುಳ್ಳವರು ಅಧಿಸೂಚನೆಯಲ್ಲಿ ಸೂಚಿಸಿದ್ದರ ಷರತ್ತುಗಳನ್ವಯ ತಮ್ಮ ವೈಯಕ್ತಿಕ ಮಾಹಿತಿಯನ್ನು ಜುಲೈ 5, 2025 ರೊಳಗಾಗಿ ದೇವಸ್ಥಾನದ ಆಡಳಿತಾಧಿಕಾರಿಗಳು ಆಗಿರುವ ಧಾರವಾಡ ಜಿಲ್ಲಾ ನ್ಯಾಯಾಲಯದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ.
ಅಧಿಸೂಚನೆಯ ಹೆಚ್ಚಿನ ಮಾಹಿತಿಗಾಗಿ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಮಾಲತೇಶ ದೇವಸ್ಥಾನ, ದೇವರಗುಡ್ಡ, ತಾಃ ರಾಣೇಬೆನ್ನೂರು, ಜಿಲ್ಲೆಃ ಹಾವೇರಿ ಇಲ್ಲಿಗೆ ಸಂಪರ್ಕಿಸಲು ದೇವಸ್ಥಾನದ ಆಡಳಿತ ಅಧಿಕಾರಿಗಳು ಆಗಿರುವ ಧಾರವಾಡ ಜಿಲ್ಲಾ ನ್ಯಾಯಾಲಯದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa