ಧಾರವಾಡ, 29 ಜೂನ್ (ಹಿ.ಸ.) :
ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಆಯೋಜಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶಾಸ್ತ್ರೀಯ ಸಂಗೀತ ಹಾಗೂ ನೃತ್ಯ, ಸುಗಮ ಸಂಗೀತ, ಜನಪದ ವಾದ್ಯ ಮತ್ತು ಗಾಯನ, ಸಮೂಹ ನೃತ್ಯ, ನಾಟಕ, ಬಯಲಾಟ, ಗಮಕ, ಕಥಾ ಕೀರ್ತನೆ ಮುಂತಾದ ಕಲಾಪ್ರಕಾರಗಳಲ್ಲಿ ನಿರತರಾಗಿರುವ ಕಲಾವಿದರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಇಲಾಖೆಯ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತ ಕಲಾವಿದರು ಹಾಗೂ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಂಸ್ಕøತಿಕ ಸೌರಭ, ಯುವ ಸೌರಭ ಹಾಗೂ ಚಿಗುರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಚ್ಚಿಸುವ ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ. ಆಕಾಶವಾಣಿಯ ಬಿ, ಬಿ-ಹೈ ಮತ್ತು ಎ ಗ್ರೇಡ್ ಕಲಾವಿದರಿಗೆ ಹಾಗೂ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿ ಪುರಸ್ಕøತ ಕಲಾವಿದರನ್ನು ಸಾಂಸ್ಕøತಿಕ ಸೌರಭ ಕಾರ್ಯಕ್ರಮಕ್ಕೆ ಪರಿಗಣಿಸಲಾಗುತ್ತಿದೆ. ಕಲಾವಿದರು 30 ವರ್ಷ ಮೇಲ್ಪಟ್ಟವರಾಗಿರಬೇಕು. 15 ರಿಂದ 30 ವರ್ಷದ ಪ್ರತಿಭಾವಂತ ಯುವ ಕಲಾವಿದರನ್ನು ಯುವ ಸೌರಭ ಕಾರ್ಯಕ್ರಮಕ್ಕೆ ಪರಿಗಣಿಸಲಾಗುತ್ತಿದೆ. 8 ರಿಂದ 14 ವರ್ಷದ ಪ್ರತಿಭಾವಂತ ಬಾಲ ಪ್ರತಿಭೆ ಗಳಿಗೆ ಅವಕಾಶ ಕಲ್ಪಿಸಲು ಚಿಗರು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿಚ್ಚಿಸುವ ಕಲಾವಿದರು, ಕಲಾತಂಡದವರು ಕಲಾ ಸೇವೆಯ ದಾಖಲೆಗಳು ಹಾಗೂ ಸ್ವ-ವಿವರ ಅರ್ಜಿಯನ್ನು ಜುಲೈ 05, 025 ರೊಳಗಾಗಿ ಧಾರವಾಡ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2442909 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa