ಉತ್ತರಾಖಂಡದಲ್ಲಿ ಮೇಘ ಸ್ಪೋಟ ; ೯ ಮಂದಿ ಕಾರ್ಮಿಕರು ಕಾಣೆ
ಉತ್ತರಕಾಶಿ, 29 ಜೂನ್ (ಹಿ.ಸ.) : ಆ್ಯಂಕರ್ : ಉತ್ತರಾಖಂಡ ಯಮುನೋತ್ರಿ ಪಾಲಿಗಢದ ಓಜ್ರಿ ದಬರ್​ಕೋಟ್​ ನಡುವಿನ ಸಿಲೈ ಬ್ಯಾಂಡ್​ ಬಳಿ ತಡರಾತ್ರಿ ಸಂಭವಿಸಿದ ಮೇಘಸ್ಫೋಟದಲ್ಲಿ ಕಟ್ಟಡ ಕೆಲಸಕ್ಕೆ ಬಂದಿದ್ದ 9 ಮಂದಿ ಕಾರ್ಮಿಕರು ನಾಪತ್ತೆಯಾಗಿದ್ದಾರೆ . ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸ್​, ರಾಜ್ಯ ವ
Rain


ಉತ್ತರಕಾಶಿ, 29 ಜೂನ್ (ಹಿ.ಸ.) :

ಆ್ಯಂಕರ್ : ಉತ್ತರಾಖಂಡ ಯಮುನೋತ್ರಿ ಪಾಲಿಗಢದ ಓಜ್ರಿ ದಬರ್​ಕೋಟ್​ ನಡುವಿನ ಸಿಲೈ ಬ್ಯಾಂಡ್​ ಬಳಿ ತಡರಾತ್ರಿ ಸಂಭವಿಸಿದ ಮೇಘಸ್ಫೋಟದಲ್ಲಿ ಕಟ್ಟಡ ಕೆಲಸಕ್ಕೆ ಬಂದಿದ್ದ 9 ಮಂದಿ ಕಾರ್ಮಿಕರು ನಾಪತ್ತೆಯಾಗಿದ್ದಾರೆ .

ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸ್​, ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಸ್ಥಳಕ್ಕೆ ಧಾವಿಸಿವೆ.

ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಸಿಲೈ ಬ್ಯಾಂಡ್ ಬಳಿ ಎರಡು-ಮೂರು ಸ್ಥಳಗಳಲ್ಲಿ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯನ್ನು ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಕಾಣೆಯಾದವರಲ್ಲಿ ಮಹಿಳೆಯರೂ ಸೇರಿದ್ದಾರೆ ಎಂದು ಹೇಳಲಾಗುತ್ತಿದೆ. ಜೊತೆಗೆ ಕಾಣೆಯಾದ ಕಾರ್ಮಿಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ನಿನ್ನೆ ತಡರಾತ್ರಿ ತಹಸಿಲ್​ ಬಾರ್ಕೋಟ್​ನ ಸಿಲೈ ಬಾಂಡ್ ಬಳಿ ಮೇಘಸ್ಫೋಟ ಸಂಭವಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande