ರಾಜ್ಯ ರೈಲ್ವೆ ಯೋಜನೆಗಳಿಗೆ ಕಾಂಗ್ರೆಸ್ ತಡೆ : ವಿಜಯೇಂದ್ರ ಆಕ್ರೋಶ
ಬೆಂಗಳೂರು, 29 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಮಂಜೂರಾದ ಹೊಸ ರೈಲ್ವೆ ಯೋಜನೆಗಳಿಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಣ ನೀಡಲು ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. “ರಾಜ್ಯ ಸರ್ಕಾರ ''ಹಣ ಇಲ್ಲ'' ಎಂಬುದನ್ನು ಕಾರಣವಿಟ
Byv


ಬೆಂಗಳೂರು, 29 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಮಂಜೂರಾದ ಹೊಸ ರೈಲ್ವೆ ಯೋಜನೆಗಳಿಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಣ ನೀಡಲು ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

“ರಾಜ್ಯ ಸರ್ಕಾರ 'ಹಣ ಇಲ್ಲ' ಎಂಬುದನ್ನು ಕಾರಣವಿಟ್ಟುಕೊಂಡು ಮಹತ್ವದ ಯೋಜನೆಗಳಿಗೆ ಕೈಬಿಟ್ಟಿದ್ದು, ಇದು ಲಕ್ಷಾಂತರ ಜನರ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ,” ಎಂದು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು-ಕುಶಾಲನಗರ, ಬೆಂಗಳೂರು-ಸತ್ಯಮಂಗಲ ಮಾರ್ಗಗಳಂತಹ ಬಹು ನಿರೀಕ್ಷಿತ ಯೋಜನೆಗಳು ಸ್ಥಗಿತಗೊಳ್ಳುತ್ತಿರುವುದನ್ನು ಅವರು ಖಂಡಿಸಿದ್ದು, ಸಾರ್ವಜನಿಕ ಸಾರಿಗೆ ಮೂಲಸೌಕರ್ಯ ಅಭಿವೃದ್ಧಿಯೇ ರಾಜ್ಯದ ಅಭಿವೃದ್ಧಿಗೆ ಪೂರಕ. ಆದರೆ ಕಾಂಗ್ರೆಸ್ ಸರ್ಕಾರದ ನಿರ್ಲಿಪ್ತತೆ ರಾಜ್ಯವನ್ನು ಹಿಂದಕ್ಕೆ ತಳ್ಳುತ್ತಿದೆ,” ಎಂದಿದ್ದಾರೆ.

ರಾಜ್ಯದ ಆರ್ಥಿಕ ಸ್ಥಿತಿ ದಯನೀಯವಾಗಿದ್ದು, ಗ್ರಾಮಮಟ್ಟದಲ್ಲಿ ಸಾಂವಿಧಾನಿಕ ಸೇವೆಗಳನ್ನೂ ಒದಗಿಸಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ, ಲಂಚ, ಕಮಿಷನ್ ರಾಜಕಾರಣಕ್ಕೆ ಸಾಕ್ಷಿಯಂತೆ ಈ ಸರ್ಕಾರ ನಡೆದುಕೊಳ್ಳುತ್ತಿದೆ. ಜನರ ಅಭಿವೃದ್ಧಿ ಕನಸುಗಳನ್ನು ಈಡೇರಿಸದೇ ರಾಜ್ಯದ ಭವಿಷ್ಯವನ್ನು ಅಂಧಕಾರಕ್ಕೆ ತಳ್ಳುತ್ತಿದೆ,” ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande