ಸಾರ್ವಜನಿಕರ ಸದುಪಯೋಗಕ್ಕೆ ನಿಯಂತ್ರಣ ಕೊಠಡಿ
ಹಾಸನ, 29 ಜೂನ್ (ಹಿ.ಸ.) : ಆ್ಯಂಕರ್ : ಹಾಸನ ಕಂದಾಯ ಉಪವಿಭಾಗ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ಸಕಾಲದಲ್ಲಿ ಪರಿಹರಿಸುವ ಸಲುವಾಗಿ ಅವಘಡಗಳನ್ನು ತಪ್ಪಿಸಿ ಸಾರ್ವಜನಿಕರ ಜೀವ ಹಾಗೂ ಆಸ್ತಿಗಳಿಗೆ ಹಾನಿ ಉಂಟಾಗುವುದನ್ನು ತಪ್ಪಿಸುವ ಹಿತದೃಷ್ಟಿಯಿಂದ ಹಾಸನ ಉಪವಿಭಾಗಾಧಿಕಾರಿಗಳ
ಸಾರ್ವಜನಿಕರ ಸದುಪಯೋಗಕ್ಕೆ ನಿಯಂತ್ರಣ ಕೊಠಡಿ


ಹಾಸನ, 29 ಜೂನ್ (ಹಿ.ಸ.) :

ಆ್ಯಂಕರ್ : ಹಾಸನ ಕಂದಾಯ ಉಪವಿಭಾಗ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ಸಕಾಲದಲ್ಲಿ ಪರಿಹರಿಸುವ ಸಲುವಾಗಿ ಅವಘಡಗಳನ್ನು ತಪ್ಪಿಸಿ ಸಾರ್ವಜನಿಕರ ಜೀವ ಹಾಗೂ ಆಸ್ತಿಗಳಿಗೆ ಹಾನಿ ಉಂಟಾಗುವುದನ್ನು ತಪ್ಪಿಸುವ ಹಿತದೃಷ್ಟಿಯಿಂದ ಹಾಸನ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ 24/7 ನಿಯಂತ್ರಣಾ ಕೊಠಡಿಯನ್ನು ತೆರೆಯಲಾಗಿದೆ ಮತ್ತು ದೂರವಾಣಿ ಸಂಖ್ಯೆ 08172-268403 ಸಂಪರ್ಕಿಸಲು ತಿಳಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಹಾಸನ ಉಪ ವಿಭಾಗಾಧಿಕಾರಿಯವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande