ಹಾಸನ, 29 ಜೂನ್ (ಹಿ.ಸ.) :
ಆ್ಯಂಕರ್ : ಹಾಸನ ಕಂದಾಯ ಉಪವಿಭಾಗ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ಸಕಾಲದಲ್ಲಿ ಪರಿಹರಿಸುವ ಸಲುವಾಗಿ ಅವಘಡಗಳನ್ನು ತಪ್ಪಿಸಿ ಸಾರ್ವಜನಿಕರ ಜೀವ ಹಾಗೂ ಆಸ್ತಿಗಳಿಗೆ ಹಾನಿ ಉಂಟಾಗುವುದನ್ನು ತಪ್ಪಿಸುವ ಹಿತದೃಷ್ಟಿಯಿಂದ ಹಾಸನ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ 24/7 ನಿಯಂತ್ರಣಾ ಕೊಠಡಿಯನ್ನು ತೆರೆಯಲಾಗಿದೆ ಮತ್ತು ದೂರವಾಣಿ ಸಂಖ್ಯೆ 08172-268403 ಸಂಪರ್ಕಿಸಲು ತಿಳಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಹಾಸನ ಉಪ ವಿಭಾಗಾಧಿಕಾರಿಯವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa