ಮೈಸೂರು, 29 ಜೂನ್ (ಹಿ.ಸ.) :
ಆ್ಯಂಕರ್ : ಆಷಾಢ ಮಾಸದ ಅಂಗವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುವ ಹಿನ್ನೆಲೆ ಬೆಟ್ಟಕ್ಕೆ ಇಂದು ಸಚಿವ ಎಚ್.ಸಿ.ಮಹಾದೇವಪ್ಪ ಭೇಟಿ ನೀಡಿ ಭಕ್ತಾದಿಗಳು ಹಾಗೂ ಪ್ರವಾಸಿಗರಿಗೆ ಕಲ್ಪಿಸಿರುವ ಅಗತ್ಯ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಸುಗಮ ಸಂಚಾರಕ್ಕಾಗಿ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧಿಸಿದ್ದು, ಜನರು ತಮ್ಮ ವಾಹನಗಳನ್ನು ಲಲಿತಮಹಲ್ ಅರಮನೆ ಆವಣದಲ್ಲಿ ನಿಲ್ಲಿಸಿ ಸಾರಿಗೆ ಬಸ್ಗಳಲ್ಲಿ ಬೆಟ್ಟಕ್ಕೆ ಉಚಿತವಾಗಿ ಪ್ರಯಾಣಿಸಿ ಬಂದವರು, ಗರ್ಭಗುಡಿಗೆ ತೆರಳುವ ಮಾರ್ಗವನ್ನು ಹಾಗೂ ವಿಶೇಷ ದರ್ಶನಕ್ಕಾಗಿ 2 ಸಾವಿರ ರೂ. ಟಿಕೆಟ್ ಖರೀದಿಸಿ ಬರುವವರ ಸೌಲಭ್ಯಗಳ ಕುರಿತು ಜನರಿಂದಲೇ ಮಾಹಿತಿ ಪಡೆದರು.
ಭಕ್ತಾದಿಗಳು ಹಾಗೂ ಪ್ರಾವಾಸಿಗರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಇನ್ನೂ ಹೆಚ್ಚಿನ ಅಗತ್ಯ ಸೌಕರ್ಯ ಕಲ್ಪಿಸಿಕೊಡಬೇಕು. ಏಕಬಳಕೆಯ ಪ್ಲಾಸ್ಟಿಕ್ ಸಂಪೂರ್ಣವಾಗಿ ನಿಷೇಧಿಸಿರುವ ಕ್ರಮ ಸೂಕ್ತವಾಗಿದ್ದು, ಇದೇ ರೀತಿಯಲ್ಲಿ ಮುಂದುವರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa