ಗದಗ, 29 ಜೂನ್ (ಹಿ.ಸ.) :
ಆ್ಯಂಕರ್ : ಎಲ್ಲಾ ಹಬ್ಬ-ಹರಿದಿನಗಳನ್ನು ಶಾಂತಿ-ಸೌಹಾರ್ದತೆಯಿಂದ ಆಚರಣೆ ಮಾಡಲಾಗುತ್ತಿದ್ದು, ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿ-ಸೌಹಾರ್ದತೆಯಿಂದ ಆಚರಣೆ ಮಾಡಬೇಕು ಎಂದು ಮುಳಗುಂದ ಪೊಲೀಸ್ ಠಾಣೆ ಸಿಪಿಐ ಸಂಗಮೇಶ ಶಿವಯೋಗಿ ಹೇಳಿದರು.
ಗದಗ ತಾಲೂಕಿನ ಮುಳಗುಂದ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮುಳಗುಂದ ವ್ಯಾಪ್ತಿಯ ಗ್ರಾಮಗಳ ಮುಖಂಡರ ಶಾಂತಿ ಸಭೆಯನ್ನುದ್ದೇಶಿಸಿ ಮಾತನಾಡಿ, ಮೊಹರಂ ಹಬ್ಬವನ್ನು ಹಿಂದೂ-ಮುಸ್ಲಿಂ ಬಾಂಧವರು ಶಾಂತಿ ಸೌಹಾರ್ದತೆಯಿಂದ ಆಚರಣೆ ಮಾಡುತ್ತಾ ಬಂದಿದ್ದಾರೆ. ಆ ನಿಟ್ಟಿನಲ್ಲಿ ಎಲ್ಲರೂ ಶಾಂತಿ-ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕು ಎಂದರು.
ಈ ಸಂದರ್ಭದಲ್ಲಿ ಅಶೋಕ ಹುಣಶಿಮರದ, ಎ.ಡಿ. ಮುಜಾವಾರ, ಮುನ್ನಾ ಡಾಲಾಯತ, ಬಾಪುಸಾಬ ಕಿಲ್ಲೇದಾರ, ದೇವರಾಜ ಸಂಗನಪೇಟಿ, ರಮೇಶ ಮ್ಯಾಗೇರಿ, ಪೊಲೀಸ್ ಸಿಬ್ಬಂದಿಗಳಾದ ಬಸವರಾಜ ಕುರ್ತಕೋಟಿ, ಎಚ್.ಬಿ. ಗುಡ್ಡಣ್ಣವರ, ವಿ.ವೈ. ಪೂಜಾರ, ನಾಗರಾಜ ಸೌಲಭಾವಿ, ಸಂತೋಷ ಹಿರೇಮಠ ಹಾಗೂ ಮುಳಗುಂದ ವ್ಯಾಪ್ತಿಯ ಮುಖಂಡರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / Lalita MP